SL Bhyrappa’s Funeral: ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್​​ಎಲ್​​ ಭೈರಪ್ಪ

Edited By:

Updated on: Sep 26, 2025 | 1:35 PM

SL Bhyrappa Last Rites: ಹಿರಿಯ ಸಾಹಿತಿ, ಸರಸ್ವತಿ ಪುತ್ರ ಎಸ್.ಎಲ್.ಭೈರಪ್ಪ ಅವರು ಶುಕ್ರವಾರದಂದು ಪಂಚಭೂತಗಳಲ್ಲಿ ಲೀನರಾದರು. ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನ ಚಿತಾಗಾರದಲ್ಲಿ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗಿದೆ. ಈ ವೇಳೆ ಅಭಿಮಾನಿಗಳು ಸೇರಿ ಸಾವಿರಾರು ಜನರು ಭಾಗಿಯಾಗಿದ್ದರು. ವಿಡಿಯೋ ನೋಡಿ.

ಮೈಸೂರು, ಸೆಪ್ಟೆಂಬರ್​ 26: ಬರವಣಿಗೆಯೇ ಬದುಕು, ಕಾದಂಬರಿ ರಚನೆಯೇ ಕಸುಬಾಗಿಸಿಕೊಂಡಿದ್ದ ಹಿರಿಯ ಸಾಹಿತಿ ಎಸ್​.ಎಲ್. ಭೈರಪ್ಪ (SL Bhyrappa) ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಸಕಲ ಸರ್ಕಾರಿ ಗೌರವದೊಂದಿಗೆ ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ, ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ, ಮಾಜಿ ಸಂಸದ ಪ್ರತಾಪ್ ಸಿಂಹ, ಸಚಿವ ಕೆ.ವೆಂಕಟೇಶ್, ಅಭಿಮಾನಿಗಳು ಸೇರಿ ಸಾವಿರಾರು ಜನರು ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Sep 26, 2025 01:33 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More