ಆರೋಗ್ಯವಂತ ಗಂಡುಮಗುವಿಗೆ ಜನ್ಮನೀಡಿದ ಮೃತ ರೇಣುಕಾಸ್ವಾಮಿ ಪತ್ನಿ ಸಹನಾ

|

Updated on: Oct 16, 2024 | 12:18 PM

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದು ಚಿತ್ರನಟ ದರ್ಶನ್, ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳಲ್ಲಿ ಒಬ್ಬರಿಗೆ ಮೊನ್ನೆ ಜಾಮೀನು ಸಿಕ್ಕಿದೆ ಮಿಕ್ಕವರು ಅದಕ್ಕಾಗಿ ಎದುರು ನೋಡುತ್ತಿದ್ದಾರೆ.

ಚಿತ್ರದುರ್ಗ: ಜೂನ್ ತಿಂಗಳಲ್ಲಿ ಕೊಲೆಯಾದ ರೇಣುಕಾಸ್ವಾಮಿಯವರ ಪತ್ನಿ ಸಹನಾ ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಒಂದು ಗಂಡು ಮಗುವಿಗೆ ಜನ್ಮನೀಡಿದ್ದಾರೆ. ಮಾಧ್ಯಮಗಳ ಜೊತೆ ಭಾವುಕರಾಗಿ ತಮ್ಮ ಸಂತಸವನ್ನು ಹಂಚಿಕೊಂಡ ರೇಣುಕಾಸ್ವಾಮಿ ತಂದೆ ಶಿವನಗೌಡ, ಆರೋಗ್ಯವಂತ ಗಂಡುಮಗುವಿಗೆ ತಮ್ಮ ಸೊಸೆ ಜನ್ಮ ನೀಡಿದ್ದಾರೆ, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ, ತಮ್ಮ ಮಗನೇ ಮತ್ತೊಮ್ಮೆ ಹುಟ್ಟಿ ಬಂದಷ್ಟು ಸಂತೋಷವಾಗುತ್ತಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ ಇಲ್ಲಿದೆ

Follow us on