ಕಂದಾಯ ಸಚಿವನಾಗಿದ್ದಾಗ ನಾನು ಸ್ಟ್ಯಾಂಪ್ ಡ್ಯೂಟಿಯನ್ನು ಶೇ. 5ರಷ್ಟು ಕಮ್ಮಿ ಮಾಡಿದ್ದೆ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Jan 04, 2025 | 1:34 PM

ಸಿದ್ದರಾಮಯ್ಯ ಕೆಲದಿನಗಳಲ್ಲಿ ಸ್ಥಾನದಿಂದ ಕೆಳಗಿಳಿಯುತ್ತಾರೆ, ಹಾಗಾಗಿ ಅವರಿಗೆ ಸರ್ಕಾರ ಮತ್ತು ತಮ್ಮ ಸಚಿವರ ಮೇಲೆ ಹಿಡಿತವಿಲ್ಲ, ಎಲ್ಲರೂ ಲೂಟಿಯಲ್ಲಿ ತೊಡಗಿದ್ದಾರೆ, ಸಚಿನ್ ಪಾಂಚಾಳ್ ಸಾವು ಒಂದು ಕೊಲೆ, ಅವರ ಕುಟುಂಬಕ್ಕೆ ಈ ಸರ್ಕಾರದ ಮೇಲೆ ನಂಬಿಕೆಯಿಲ್ಲದ ಕಾರಣ ಪ್ರಧಾನಿ ಮತ್ತು ಗೃಹಸಚಿವರಿಗೆ ಪತ್ರ ಬರೆದಿದ್ದಾರೆ, ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಬಿಜೆಪಿ ಅವರೊಂದಿಗೆ ನಿಲ್ಲುತ್ತದೆ ಎಂದು ಅಶೋಕ ಹೇಳಿದರು.

ಕಲಬುರಗಿ: ಪ್ರಿಯಾಂಕ್ ಖರ್ಗೆ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ವಿಪಕ್ಷ ನಾಯಕ ಅರ್ ಅಶೋಕ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೇರಿಕೆ ಆಗೋದು ನಿರಂತರ ಪ್ರಕ್ರಿಯೆ, ಸರ್ಕಾರೀ ನೌಕರರ ಸಂಬಳ ಸಹ 4 ವರ್ಷಗಳಿಗೊಮ್ಮೆ ಪರಿಷ್ಕರಣೆ ಮಾಡಬೇಕಾಗುತ್ತದೆ, ಸಾರಿಗೆ ಸಚಿವನಾಗಿದ್ದಾಗ ತಾನು ನೌಕರರ ಸಂಬಳ ಹೆಚ್ಚಿಸಿದ್ದಾಗಿ ಹೇಳಿದರು. ಕೋವಿಡ್ ಸಮಯದಲ್ಲಿ ತಮ್ಮ ಸರ್ಕಾರ ಅಧಿಕಾರದಲ್ಲಿತ್ತು ಮತ್ತು ತೆರಿಗೆ ಸಂಗ್ರಹ ಪಾತಾಳಕ್ಕಿಳಿದಿತ್ತು, ಆದಾಗ್ಯೂ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಿತ್ತು, ಮತ್ತು ಕಂದಾಯ ಸಚಿವನಾಗಿದ್ದ ತಾನು ಸ್ಟ್ಯಾಂಪ್ ಡ್ಯೂಟಿಯನ್ನು ಶೇಕಡ 5ರಷ್ಟು ಕಡಿಮೆ ಮಾಡಿದ್ದೆ, ಬಸ್ ಟಿಕೆಟ್ ದರ ಹೆಚ್ಚಿಸುವ ಮೂಲಕ ಈ ಸರ್ಕಾರ ದಿವಾಳಿಯೆದ್ದಿದೆ ಅನ್ನೋದು ಸಾಬೀತಾಗಿದೆ ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದೊಳಗೆ ಹೋಗಲು ಬಿಡದ ಪೊಲೀಸ್ ಅಧಿಕಾರಿಗೆ ಅರ್ ಅಶೋಕ ಮನಬಂದಂತೆ ತರಾಟೆ! 

Published on: Jan 04, 2025 01:12 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.