Karnataka Assembly Polls: ಡಿಕೆ ಶಿವಕುಮಾರ್ ಹೊತ್ತ ಹೆಲಿಕಾಪ್ಟರ್ ಲ್ಯಾಂಡ್ ಆದ ಹೆಲಿಪ್ಯಾಡ್ ಬಳಿ ಬೆಂಕಿ, ಸ್ಮೋಕ್ ಕ್ಯಾಂಡಲ್ ಹೊತ್ತಿ ಉರಿದು ಅವಾಂತರ!
ಹೆಲಿಪ್ಯಾಡ್ ಇರುವ ಸ್ಥಳವನ್ನು ಗೊತ್ತು ಮಾಡಲು ಉಪಯೋಗಿಸುವ ಸ್ಮೋಕ್ ಕ್ಯಾಂಡಲ್ ಗೆ ಬೆಂಕಿ ಹೊತ್ತಿಕೊಂಡುಬಿಟ್ಟಿತ್ತು.
ಕಾರವಾರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಹೆಲಿಕಾಪ್ಟರ್ ಪ್ರಯಾಣ ಸರಿಬರುತ್ತಿಲ್ಲ ಅನಿಸುತ್ತೆ. ಇಂದು ಅವರು ಹೊನ್ನಾವರಕ್ಕೆ (Honnavar) ಹತ್ತಿರವಿರುವ ರಾಮತೀರ್ಥಕ್ಕೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದಾಗ ಹೆಲಿಪ್ಯಾಡ್ (helipad) ನಿರ್ಮಿಸಲಾಗಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಿವಕುಮಾರ್ ಮೈಸೂರಿಂದ ಹೊನ್ನಾವರಕ್ಕೆ ಆಗಮಿಸಿದಾಗ ಈ ಘಟನೆ ಸಂಭವಿಸಿದೆ. ಮೂಲಗಳ ಪ್ರಕಾರ ಹೆಲಿಪ್ಯಾಡ್ ಇರುವ ಸ್ಥಳವನ್ನು ಗೊತ್ತು ಮಾಡಲು ಉಪಯೋಗಿಸುವ ಸ್ಮೋಕ್ ಕ್ಯಾಂಡಲ್ ಗೆ ಬೆಂಕಿ ಹೊತ್ತಿಕೊಂಡುಬಿಟ್ಟಿತ್ತು. ಅಗ್ನಿಶಾಮಕ ದಳದವರು ಕೂಡಲೇ ಬೆಂಕಿ ನಂದಿಸಿದ್ದಾರೆ. ನಿಮಗೆ ಗೊತ್ತಿದೆ, ಎರಡು ದಿನಗಳ ಹಿಂದೆ ಶಿವಕುಮಾರ್ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ನಿಂದ ಮುಳುಬಾಗಿಲುಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ಗೆ ಒಂದು ರಣಹದ್ದು ಹಾರಿಬಂದು ಅಪ್ಪಳಿಸಿದ್ದರಿಂದ ಗಾಜು ಪುಡಿಯಾಗಿತ್ತು. ಶಿವಕುಮಾರ್ ಅವರೊಂದಿಗೆ ಟವಿ9 ವರದಿಗಾರ ಮತ್ತು ಕೆಮೆರಾಮನ್ ಕೂಡ ಇದ್ದರು. ಎಲ್ಲರೂ ಅಪಾಯದಿಂದ ಪಾರಾಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
