Karnataka Assembly Polls: ಡಿಕೆ ಶಿವಕುಮಾರ್ ಹೊತ್ತ ಹೆಲಿಕಾಪ್ಟರ್ ಲ್ಯಾಂಡ್ ಆದ ಹೆಲಿಪ್ಯಾಡ್ ಬಳಿ ಬೆಂಕಿ, ಸ್ಮೋಕ್ ಕ್ಯಾಂಡಲ್ ಹೊತ್ತಿ ಉರಿದು ಅವಾಂತರ!

ಅರುಣ್​ ಕುಮಾರ್​ ಬೆಳ್ಳಿ

Updated on: May 04, 2023 | 4:36 PM

ಹೆಲಿಪ್ಯಾಡ್ ಇರುವ ಸ್ಥಳವನ್ನು ಗೊತ್ತು ಮಾಡಲು ಉಪಯೋಗಿಸುವ ಸ್ಮೋಕ್ ಕ್ಯಾಂಡಲ್ ಗೆ ಬೆಂಕಿ ಹೊತ್ತಿಕೊಂಡುಬಿಟ್ಟಿತ್ತು.

ಕಾರವಾರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಹೆಲಿಕಾಪ್ಟರ್ ಪ್ರಯಾಣ ಸರಿಬರುತ್ತಿಲ್ಲ ಅನಿಸುತ್ತೆ. ಇಂದು ಅವರು ಹೊನ್ನಾವರಕ್ಕೆ (Honnavar) ಹತ್ತಿರವಿರುವ ರಾಮತೀರ್ಥಕ್ಕೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದಾಗ ಹೆಲಿಪ್ಯಾಡ್ (helipad) ನಿರ್ಮಿಸಲಾಗಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಿವಕುಮಾರ್ ಮೈಸೂರಿಂದ ಹೊನ್ನಾವರಕ್ಕೆ ಆಗಮಿಸಿದಾಗ ಈ ಘಟನೆ ಸಂಭವಿಸಿದೆ. ಮೂಲಗಳ ಪ್ರಕಾರ ಹೆಲಿಪ್ಯಾಡ್ ಇರುವ ಸ್ಥಳವನ್ನು ಗೊತ್ತು ಮಾಡಲು ಉಪಯೋಗಿಸುವ ಸ್ಮೋಕ್ ಕ್ಯಾಂಡಲ್ ಗೆ ಬೆಂಕಿ ಹೊತ್ತಿಕೊಂಡುಬಿಟ್ಟಿತ್ತು. ಅಗ್ನಿಶಾಮಕ ದಳದವರು ಕೂಡಲೇ ಬೆಂಕಿ ನಂದಿಸಿದ್ದಾರೆ. ನಿಮಗೆ ಗೊತ್ತಿದೆ, ಎರಡು ದಿನಗಳ ಹಿಂದೆ ಶಿವಕುಮಾರ್ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ನಿಂದ ಮುಳುಬಾಗಿಲುಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ಗೆ ಒಂದು ರಣಹದ್ದು ಹಾರಿಬಂದು ಅಪ್ಪಳಿಸಿದ್ದರಿಂದ ಗಾಜು ಪುಡಿಯಾಗಿತ್ತು. ಶಿವಕುಮಾರ್ ಅವರೊಂದಿಗೆ ಟವಿ9 ವರದಿಗಾರ ಮತ್ತು ಕೆಮೆರಾಮನ್ ಕೂಡ ಇದ್ದರು. ಎಲ್ಲರೂ ಅಪಾಯದಿಂದ ಪಾರಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.