ಕಳ್ರು ಕಳ್ರು ಒಂದಾಗಿದ್ದಾರೆ; ಸಿದ್ದರಾಮಯ್ಯ ಪರ ನಿಂತ ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ

| Updated By: ಆಯೇಷಾ ಬಾನು

Updated on: Oct 04, 2024 | 12:59 PM

ದೂರುದಾರ ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣದಲ್ಲಿ ಜಿಟಿ ದೇವೇಗೌಡರ ಅಕ್ರಮವೂ ಇದೆ ಎಂದು ಆರೋಪ ಮಾಡಿದ್ದಾರೆ. ಅವರೂ ಕೂಡ ಹಗರಣದಲ್ಲಿ ಭಾಗಿಯಾಗಿರುವುದರಿಂದ ಸಿಎಂ ಪರ ನಿಂತಿದ್ದಾರೆ. ಕಳ್ರು ಕಳ್ರು ಒಂದಾಗಿದ್ದಾರೆ. ಗುಟ್ಟಾಗಿ ಸಭೆಗಳನ್ನು ನಡೆಸಿ ಸಂಚು ರೂಪಿಸುತ್ತಿದ್ದಾರೆ ಎಂದರು.

ಮೈಸೂರು, ಅ.04: ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಭಾರಿ ಸಿಎಂ ಆಗಿದ್ದಾರೆ ಎಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದವೇ ಕಾರಣ ಎಂದು ನಿನ್ನೆ ನಡೆದ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತಾಡಿದ್ದರು. ಇದು ದೋಸ್ತಿ ನಾಯಕರ ಆಕ್ರೋಶಕ್ಕೂ ಕಾರಣವಾಗಿತ್ತು. ಇದರ ನಡುವೆ ಈಗ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣದಲ್ಲಿ ಜಿಟಿ ದೇವೇಗೌಡರ ಅಕ್ರಮವೂ ಇದೆ ಎಂದು ಆರೋಪ ಮಾಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಇಂದು ಮೈಸೂರಿನ ವಿಜಯನಗರದಲ್ಲಿರುವ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿದ್ದ 14 ಸೈಟ್ಗಳ ಸ್ಥಳ ಮಹಜರು ನಡೆಸಿದರು. ಈ ವೇಳೆ ಸ್ಥಳದಲ್ಲಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣದಲ್ಲಿ ಜಿಟಿ ದೇವೇಗೌಡರ ಅಕ್ರಮವೂ ಇದೆ ಎಂದು ಆರೋಪ ಮಾಡಿದ್ದಾರೆ. ಅವರೂ ಕೂಡ ಹಗರಣದಲ್ಲಿ ಭಾಗಿಯಾಗಿರುವುದರಿಂದ ಸಿಎಂ ಪರ ನಿಂತಿದ್ದಾರೆ. ಕಳ್ರು ಕಳ್ರು ಒಂದಾಗಿದ್ದಾರೆ. ಗುಟ್ಟಾಗಿ ಸಭೆಗಳನ್ನು ನಡೆಸಿ ಸಂಚು ರೂಪಿಸುತ್ತಿದ್ದಾರೆ. ನಾನು ಕೇವಲ ಸಿದ್ದರಾಮಯ್ಯ ಅಲ್ಲ. ಇಡೀ ಅಕ್ರಮದ ವಿರುದ್ಧ ಹೋರಾಡುವೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us on