AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣದಲ್ಲಿ  100 ಕೋಟಿ ಆಸ್ತಿ ಜಪ್ತಿ:  ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ

ಮುಡಾ ಹಗರಣದಲ್ಲಿ 100 ಕೋಟಿ ಆಸ್ತಿ ಜಪ್ತಿ: ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ

ರಮೇಶ್ ಬಿ. ಜವಳಗೇರಾ
|

Updated on: Jun 10, 2025 | 3:32 PM

ರಾಜ್ಯ ರಾಜಕೀಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದ ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ED (ಜಾರಿ ನಿರ್ದೇಶನಾಲಯ) ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಮುಡಾ ಹಗರಣದಲ್ಲಿ ಇಡಿ ಬರೋಬ್ಬರಿ 100 ಕೋಟಿ ರೂಪಾಯಿ ಮೌಲ್ಯದ 92 ಸೈಟ್‌ಗಳನ್ನು ಜಪ್ ಮಾಡಿದೆ. ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಬೆಂಗಳೂರು, (ಜೂನ್ 10): ರಾಜ್ಯ ರಾಜಕೀಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದ ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ED (ಜಾರಿ ನಿರ್ದೇಶನಾಲಯ) ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಮುಡಾ ಹಗರಣದಲ್ಲಿ ಇಡಿ ಬರೋಬ್ಬರಿ 100 ಕೋಟಿ ರೂಪಾಯಿ ಮೌಲ್ಯದ 92 ಸೈಟ್‌ಗಳನ್ನು ಜಪ್ ಮಾಡಿದೆ. ಈ ಬಗ್ಗೆ ED (ಜಾರಿ ನಿರ್ದೇಶನಾಲಯ) ಬೆಂಗಳೂರು ಕಚೇರಿಯಿಂದ ಟ್ವೀಟ್ ಮಾಡಿದ್ದು, ಅಧಿಕೃತ ಮಾಹಿತಿ ನೀಡಿದೆ. PMLA (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002) ಕಾಯಿದೆಯಡಿ ಸಿಎಂ ಸಿದ್ದರಾಮಯ್ಯ ಹಾಗೂ ಇತರರಿಗೆ ಸೇರಿದ 92 ಸೈಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮುಂದಿನ 3 ಅಥವಾ 4 ತಿಂಗಳಲ್ಲಿ ರಾಜ್ಯದ ಜನರಿಗೆ ಗೊತ್ತಾಗುತ್ತದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ಶಿಕ್ಷೆ ಆಗಿಯೇ ಆಗುತ್ತೆ. ಈ ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿತ್ತು. ಈಗ ಇಡಿ ಮತ್ತೆ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದೆ. ಈ ಮೂಲಕ ಒಟ್ಟು 400 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇನ್ನೂ 800 ಸೈಟ್ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ. ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದಿದ್ದಾರೆ.