ತಿಂಗಳು ಕಳೆದರೂ ಜಮೀರ್ ವಿರುದ್ಧ ಕ್ರಮಕ್ಕೆ ಮುಂದಾಗದ ಎಜಿಯನ್ನು ವಜಾ ಮಾಡಬೇಕು: ಅಬ್ರಹಾಂ

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Oct 22, 2024 | 9:53 AM

ಸಚಿವ ಜಮೀರ್ ಹೇಳಿಕೆ ನೀಡಿ ತಿಂಗಳು ಕಳೆದರೂ ಯಾವುದೇ ಕ್ರಮಕ್ಕೆ ಮುಂದಾಗದ ಅಡ್ವೋಕೇಟ್ ಜನರಲ್ ವಿರುದ್ಧ ರಾಜ್ಯಪಾಲರು ಕ್ರಮ ತೆಗೆದುಕೊಳ್ಳಬೇಕೆಂದು ಅಬ್ರಹಾಂ ಆಗ್ರಹಿಸಿದರು. ತಾವು ಸಲ್ಲಿಸಿದ ದೂರಿನ ಪ್ರತಿಯನ್ನು ಎಜಿಯವರಿಗೆ ನೀಡಿ ಅದನ್ನು ಪರಿಗಣಿಸುವಂತೆ ಗವರ್ನರ್ ಹೇಳಬೇಕು ಇಲ್ಲವೇ ಆರ್ಟಿಕಲ್ 165ರ ಪ್ರಕಾರ ಎಜಿಯನ್ನು ಹುದ್ದೆಯಿಂದ ವಜಾ ಮಾಡಬೇಕೆಂದು ಅಬ್ರಹಾಂ ಹೇಳಿದರು.

ಬೆಂಗಳೂರು: ಸಿದ್ದರಾಮಯ್ಯನವರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಕಳೆದ ತಿಂಗಳು ವಸತಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ನೀಡಿದ ಹೇಳಿಕೆ ಅವರಿಗೆ ಕಂಟಕವಾಗಲಿದೆಯೇ? ಹೌದು, ಯಾಕೆಂದರೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಸಚಿವನ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಇವತ್ತು ರಾಜ್ಯಪಾಲರ ಮನವಿ ಸಲ್ಲಿಸಿದ್ದಾರೆ. ಸಚಿವನ ಹೇಳಿಕೆ ಘೋರ ನ್ಯಾಯಾಂಗ ನಿಂದನೆಯನ್ನು ಬಿಂಬಿಸುತ್ತದೆ ಎಂದು ಅಬ್ರಹಾಂ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್ ಅಹ್ಮದ್ ಖಾನ್

Published on: Oct 21, 2024 07:17 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.