DKS clears the air; ಕಾಂಗ್ರೆಸ್ ಸೇರುವ ಬಗ್ಗೆ ಸೋಮಣ್ಣ ಯಾವತ್ತೂ ನನ್ನೊಂದಿಗೆ ಮಾತಾಡಿಲ್ಲ: ಡಿಕೆ ಶಿವಕುಮಾರ್

Updated on: Mar 08, 2023 | 12:46 PM

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಶಿವಕುಮಾರ್, ಕಾಂಗ್ರೆಸ್ ಸೇರುವ ಬಗ್ಗೆ ಸೋಮಣ್ಣ ಆಗಲೀ ಬೇರೆ ಯಾರೇ ಆಗಲಿ ತನ್ನೊಂದಿಗೆ ಮಾತಾಡಿಲ್ಲ, ಎಲ್ಲರೂ ತಮ್ಮ ತಮ್ಮ ಪಕ್ಷಗಳ ಕೆಲಸದಲ್ಲಿ ಮಗ್ನರಾಗಿದ್ದಾರೆ ಎಂದು ಹೇಳಿದರು.

ಬೆಂಗಳೂರು: ವಸತಿ ಖಾತೆ ಸಚಿವ ವಿ ಸೋಮಣ್ಣ (V Somanna) ಅವರ ಮರ್ಮ ಯಾರಿಗೂ ಗೊತ್ತಾಗುತ್ತಿಲ್ಲ ಮಾರಾಯ್ರೇ. ಆಫ್ ಕೋರ್ಸ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದೇನೆ ಅಂತ ಎಲ್ಲೂ ಹೇಳಿಲ್ಲ. ಆದರೆ, ಡಿಕೆ ಶಿವಕುಮಾರ್ (DK Shivakumar) ಕುಟುಂಬದ ಜೊತೆ ಸೌಹಾರ್ದಯುತ ಸಂಬಂಧ ಇಟ್ಟುಕೊಂಡಿರುವುದು, ಕೆಪಿಸಿಸಿ ಅಧ್ಯಕ್ಷರ (KPCC president) ಜೊತೆ ಆಗಾಗ ಮಾತಾಡುತ್ತಿರುವುದು ಎಲ್ಲರಿಗೆ ಗೊತ್ತಿರುವ ಸಂಗತಿ. ಬುಧವಾರ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಶಿವಕುಮಾರ್, ಕಾಂಗ್ರೆಸ್ ಸೇರುವ ಬಗ್ಗೆ ಸೋಮಣ್ಣ ಆಗಲೀ ಬೇರೆ ಯಾರೇ ಆಗಲಿ ತನ್ನೊಂದಿಗೆ ಮಾತಾಡಿಲ್ಲ ಎಲ್ಲರೂ ತಮ್ಮ ತಮ್ಮ ಪಕ್ಷಗಳ ಕೆಲಸದಲ್ಲಿ ಮಗ್ನರಾಗಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More