ಕಾಂಗ್ರೆಸ್​ನವರೊಂದಿಗೆ ಸೇರಿ ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಕುಮಾರಸ್ವಾಮಿ ಗರಂ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 20, 2024 | 9:27 PM

ಮಂಡ್ಯ ಪ್ರವಾಸ ಬಳಿಕ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಕಾಂಗ್ರೆಸ್​ನವರ ಜೊತೆ ಕೆಲ ಬಿಜೆಪಿಗರು ಸೇರಿಕೊಂಡಿದ್ದಾರೆ. ನನ್ನ ವರ್ಚಸ್ಸು ಹಾಳು ಮಾಡಲು ಕೆಲ ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ. ಇದಕ್ಕೆ ನಾನು ಆಸ್ಪದ ಕೊಡಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು, ಅಕ್ಟೋಬರ್​ 20: ಮೈತ್ರಿ ಪಾಲನೆ ವಿಚಾರವಾಗಿ ನನ್ನ ವರ್ಚಸ್ಸು ಹಾಳು ಮಾಡಲು ಕೆಲ ಬಿಜೆಪಿ ನಾಯಕರ ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಬಿಜೆಪಿ ನಾಯಕರ ಮೇಲೆ ಗರಂ ಆಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ನವರ ಜೊತೆ ಕೆಲ ಬಿಜೆಪಿಗರು ಸೇರಿಕೊಂಡಿದ್ದಾರೆ. ಇದಕ್ಕೆ ನಾನು ಆಸ್ಪದ ಕೊಡಲ್ಲ. ಈ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರನ್ನು 2-3 ಬಾರಿ ಬೇಟಿ ಆಗಿದ್ದಾರೆ. ಪಕ್ಕದ ಕ್ಷೇತ್ರದ ಶಾಸಕರ ಜೊತೆಗೂ ಸಂಪರ್ಕದಲ್ಲಿ ಇದ್ದಾರೆ. ಇದೆಲ್ಲವೂ ಚರ್ಚೆ ನಡೀತಿದೆ. ಒಟ್ಟಾರೆ ಕುಮಾರಸ್ವಾಮಿ ಹೆಸರು ಹಾಳು ಮಾಡಬೇಕು. ಬಿಜೆಪಿ ವರಿಷ್ಠರ ಜೊತೆಗೆ ಸಂಬಂಧ ಹಾಳು ಮಾಡುವ ಕೆಲಸವಾಗುತ್ತಿದ್ದು, ಅದಕ್ಕೆ ನಾನು ಯಾಕೆ ಬಲಿ ಆಗಬೇಕು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on