ಸೋಮೇಶ್ವರ: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ, ರೋಚಕ ಕಾರ್ಯಾಚರಣೆ ಹೇಗಿತ್ತು ನೋಡಿ
ಸೋಮೇಶ್ವರದ ರುದ್ರಬಂಡೆಯಿಂದ ವಿದ್ಯಾರ್ಥಿನಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಸ್ಥಳೀಯ ಮೀನುಗಾರರು ಸ್ಥಳದಲ್ಲಿ ಸಿಕ್ಕ ಉಪಕರಣಗಳನ್ನು ಬಳಸಿಕೊಂಡು ಆಕೆಯನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ರೋಚಕ ವಿಡಿಯೋ ಇಲ್ಲಿದೆ.
ಮಂಗಳೂರು, ನವೆಂಬರ್ 24: ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬರು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ. ಸೋಮೇಶ್ವರದ ರುದ್ರಬಂಡೆಯಿಂದ ವಿದ್ಯಾರ್ಥಿನಿ ಸಮುದ್ರಕ್ಕೆ ಹಾರಿದ್ದಾರೆ. ತಕ್ಷಣ ಅದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ ವಿದ್ಯಾರ್ಥಿನಿಯ ರಕ್ಷಣೆ ಮಾಡಿದ್ದಾರೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us