RSS ಸಭೆ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ: ಈಗೇನಾಗುತ್ತೆ ನೋಡಬೇಕು; ಬಿಕೆ ಹರಿಪ್ರಸಾದ್
ಬೆಳಗಾವಿಯಲ್ಲಿ ನಡೆಯುತ್ತಿರುವ ಆರ್ಎಸ್ಎಸ್ ಸಭೆ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, RSS ಸಭೆ ಮಾಡಿದ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ. ಈ ಸಭೆ ಬಳಿಕ ಏನಾಗುತ್ತೆ ಅಂತಾ ನೋಡಬೇಕು ಎಂದು ಹೇಳಿದ್ದಾರೆ. ಇನ್ನು ಅಯೋಧ್ಯೆ ರಾಮಮಂದಿರ ಹುಂಡಿ ಹಣ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಬೆಂಗಳೂರು, ಜುಲೈ 10: ಬೆಳಗಾವಿಯಲ್ಲಿ ಏಕೆ ಆರ್ಎಸ್ಎಸ್ ಸಭೆ ಅಂತಾ ಗೊತ್ತಿಲ್ಲ. RSS ಸಭೆ ಮಾಡಿದ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ. ಈ ಹಿಂದೆ ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಅಂತಹವರ ಹತ್ಯೆ ಆಗಿತ್ತು. ಈ ಸಭೆ ಬಳಿಕ ಏನಾಗುತ್ತೆ ಅಂತಾ ನೋಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮಮಂದಿರ ಹುಂಡಿ ಹಣ ಕಳ್ಳತನ ಪ್ರಕರಣದ ಕುರಿತು ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಹರಿಪ್ರಸಾದ್ ತೀವ್ರ ವಾಗ್ದಾಳಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿರುವ ಅವರು, ಟ್ರಸ್ಟ್ ಸ್ಥಾಪನೆ, ಶಿಲಾನ್ಯಾಸ ಮತ್ತು ಪ್ರಾಣ ಪ್ರತಿಷ್ಠಾಪನೆಯ ಜವಾಬ್ದಾರಿಯನ್ನು ಪ್ರಧಾನಿಗಳು ಹೊರಬೇಕು ಎಂದಿದ್ದಾರೆ. 200 ಕೋಟಿ ರೂ ಲೂಟಿ ಮತ್ತು ಅಮೂಲ್ಯ ರಾಮಾಯಣ ಪುಸ್ತಕ ಕಳ್ಳತನವಾಗಿರುವ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
