ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಹೊರಟ ಪುತ್ರ: ಮಾಟಗಾರ ಎಸ್ಕೇಪ್​​, ಓರ್ವನ ಬಂಧನ

Edited By:

Updated on: May 01, 2026 | 4:32 PM

ಚಾಮರಾಜನಗರದ ಸಾಗಡೆ ಗ್ರಾಮದಲ್ಲಿ ನಿಧಿ ಆಸೆಗಾಗಿ ಪುತ್ರನೇ ತನ್ನ 80 ವರ್ಷದ ತಾಯಿಯನ್ನು ಬಲಿ ಕೊಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂಧಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಮಾಟಗಾರ ಎಸ್ಕೇಪ್​​ ಆಗಿದ್ದಾನೆ. ಗುಂಡಿ ತೋಡಿ ಪೂಜೆ ಮಾಡುತ್ತಿದ್ದ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಚಾಮರಾಜನಗರ, ಮೇ 01: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೋರ್ವ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಇಂದು (ಮೇ 1) ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತೆಂದು ಸ್ಕೆಚ್ ಹಾಕಿದ್ದ ಕೊಂಡಯ್ಯನ ಮಾದಶೆಟ್ಟಿ, 80 ವರ್ಷದ ಕಣ್ಣು ಕಾಣದ ಮತ್ತು ಕಿವಿ ಕೇಳದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ. ಬೆಳಗ್ಗೆ ತನ್ನ ಮನೆಯಲ್ಲೇ 4 ಅಡಿ ಗುಂಡಿ ತೆಗೆದು ಮಾಟದ ಮಡಕೆ ಇಟ್ಟು ಲಿಂಬೆಹಣ್ಣು, ಅರಿಶಿನ ಕುಂಕುಮ ಹಾಗೂ ಕಳಸವಿಟ್ಟು ಪೂಜೆ ಮಾಡಿದ್ದ. ಈ ಬಗ್ಗೆ ಅನುಮಾನಗೊಂಡು ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮನೆಗೆ ಪೊಲೀಸರು ಬರ್ತಿದ್ದಂತೆ ಮಾಟಗಾರ ಎಸ್ಕೇಪ್ ಆಗಿದ್ದು, ಮಾದಶೆಟ್ಟಿಯನ್ನು ಬಂಧಿಸಲಾಗಿದೆ. ನಿಧಿಗಾಗಿ ಮಾಟ ಮಾಡಿದ ವಿಚಾರ ತಿಳಿದು ಸಾಗಡೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us