AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ; ಖಡಕ್ ರಿಯಾಕ್ಷನ್ ಕೊಟ್ಟ ಸಚಿವ ಪ್ರಹ್ಲಾದ್​ ಜೋಶಿ, ಇಲ್ಲಿದೆ ವಿಡಿಯೋ

ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ; ಖಡಕ್ ರಿಯಾಕ್ಷನ್ ಕೊಟ್ಟ ಸಚಿವ ಪ್ರಹ್ಲಾದ್​ ಜೋಶಿ, ಇಲ್ಲಿದೆ ವಿಡಿಯೋ

ಹರೀಶ್ ಜಿ.ಆರ್​. ನವದೆಹಲಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 06, 2023 | 8:38 PM

ಪ್ರಜಾಪ್ರಭುತ್ವದ ದೇಗುಲ ಸಂಸತ್ ಕಾರ್ಯವೈಖರಿ ಅದನ್ನು ರಾಜಕೀಯಗೊಳಿಸಬೇಡಿ. ಅನಗತ್ಯ ವಿವಾದಗಳನ್ನು ಸೃಷ್ಟಿಸಲು ನೀವು ಪ್ರಯತ್ನಿಸಬೇಡಿ. ಹೀಗೆ ಪ್ರಯತ್ನ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ದೆಹಲಿ, ಸೆ.06: ಪ್ರಧಾನಿ ನರೇಂದ್ರ ಮೋದಿಗೆ ಸೋನಿಯಾ ಗಾಂಧಿ(Sonia Gandhi) ಪತ್ರ ಬರೆದ ವಿಚಾರ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Prahlad Joshi) ‘ಪ್ರಜಾಪ್ರಭುತ್ವದ ದೇಗುಲ ಸಂಸತ್ ಕಾರ್ಯವೈಖರಿ ಅದನ್ನು ರಾಜಕೀಯಗೊಳಿಸಬೇಡಿ. ಅನಗತ್ಯ ವಿವಾದಗಳನ್ನು ಸೃಷ್ಟಿಸಲು ನೀವು ಪ್ರಯತ್ನಿಸಬೇಡಿ. ಹೀಗೆ ಪ್ರಯತ್ನ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಎಂದರು. ದೆಹಲಿಯಲ್ಲಿ ಮಾತನಾಡಿದ ಅವರು ‘ ಬಹುಶಃ ನೀವು ಸಂಪ್ರದಾಯಗಳಿಗೆ ಗಮನ ಕೊಡುವುದಿಲ್ಲ. ಅಧಿವೇಶನ ಕರೆಯುವ ಮೊದಲು ರಾಜಕೀಯ ಪಕ್ಷಗಳ ಜತೆ ಚರ್ಚಿಸುವುದಿಲ್ಲ. ಸದನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚಿಸಲು ನಮ್ಮ ಸರ್ಕಾರ ಸಿದ್ಧವಿದೆ. ಮುಂಗಾರು ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಯಾಗಿದೆ. ನೀವು ಉಲ್ಲೇಖಿಸಿರುವ ಎಲ್ಲ ವಿಷಯ ಪ್ರಸ್ತಾಪವಾಗಿದ್ದು, ಸರ್ಕಾರ ಸ್ಪಂದಿಸಿದೆ. ಸಂಸತ್​ನ ಘನತೆಯನ್ನು ನಾವು ಕಾಪಾಡುತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ