AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ

ಮದನ್​ ಕುಮಾರ್​
|

Updated on: May 01, 2025 | 10:54 PM

Share

ನಟ ದರ್ಶನ್ ಅವರು ಜೈಲಿನಿಂದ ಬಂದ ಬಳಿಕ ಶಶಿರೇಖಾ ಕುಟುಂಬದವರನ್ನು ಭೇಟಿ ಮಾಡಿ ಧೈರ್ಯ ಹೇಳಿದ್ದಾರೆ. ಆ ಬಗ್ಗೆ ಇಂದು (ಮೇ 1) ಶಶಿರೇಖಾ ಮಾತನಾಡಿದ್ದಾರೆ. ಆದರೆ ಪವಿತ್ರಾ ಗೌಡ ಅವರ ಹಣಕಾಸಿನ ವ್ಯವಹಾರದ ಬಗ್ಗೆ ಕೇಳಿದ ಪ್ರಶ್ನೆಗೆ ಶಶಿರೇಖಾ ಅವರು ಉತ್ತರ ನೀಡಿಲ್ಲ.

ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadish) ನಿಧನರಾಗಿ ಒಂದು ವರ್ಷ ಕಳೆದಿದೆ. ಇಂದು (ಮೇ 1) ಕುಟುಂಬದವರು ಮೊದಲ ವರ್ಷದ ಪುಣ್ಯ ತಿಥಿ ನೆರವೇರಿಸಿದ್ದಾರೆ. ಈ ವೇಳೆ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಜಗದೀಶ್ ಅವರಿಗೆ ದರ್ಶನ್ (Darshan) ಕೂಡ ಆಪ್ತರಾಗಿದ್ದರು. ಪವಿತ್ರಾ ಗೌಡ (Pavithra Gowda) ಅವರಿಗೆ ಜಗದೀಶ್ ಅವರು ಕೋಟ್ಯಂತರ ರೂಪಾಯಿ ಹಣ ನೀಡಿದ್ದರು ಎಂಬ ಮಾಹಿತಿ ಕೂಡ ಇದೆ. ಆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ಶಶಿರೇಖಾ ನಿರಾಕರಿಸಿದ್ದಾರೆ. ‘ಇಂದು ಆ ಬಗ್ಗೆ ಮಾತನಾಡುವುದು ಬೇಡ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More