AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಮಡಿಲು ಸೇರಿದ ನಟಿ ಸ್ಪಂದನಾ ಅಸ್ಥಿ; ಕುಟುಂಬ ಭಾವುಕ

ಕಾವೇರಿ ಮಡಿಲು ಸೇರಿದ ನಟಿ ಸ್ಪಂದನಾ ಅಸ್ಥಿ; ಕುಟುಂಬ ಭಾವುಕ

ರಾಜೇಶ್ ದುಗ್ಗುಮನೆ
|

Updated on: Aug 12, 2023 | 9:33 AM

Share

ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ಹಾದು ಹೋದ ಕಾವೇರಿ ನದಿಯಲ್ಲಿ ನಟಿ ಸ್ಪಂದನಾ ಅವರ ಅಸ್ಥಿಯನ್ನು ಕುಟುಂಬದವರು ವಿಸರ್ಜನೆ ಮಾಡಿದ್ದಾರೆ. ಇಲ್ಲಿ ಅಸ್ಥಿ ಬಿಟ್ಟರೆ ಮೃತರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎನ್ನುವ ನಂಬಿಕೆ ಹಿಂದೂಗಳಲ್ಲಿ ಇದೆ.

ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ಹಾದು ಹೋದ ಕಾವೇರಿ ನದಿಯಲ್ಲಿ ನಟಿ ಸ್ಪಂದನಾ (Spandana) ಅವರ ಅಸ್ಥಿಯನ್ನು ಕುಟುಂಬದವರು ವಿಸರ್ಜನೆ ಮಾಡಿದ್ದಾರೆ. ಇಲ್ಲಿ ಅಸ್ಥಿ ಬಿಟ್ಟರೆ ಮೃತರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎನ್ನುವ ನಂಬಿಕೆ ಹಿಂದೂಗಳಲ್ಲಿ ಇದೆ. ಸ್ಪಂದನಾ ಅವರು ಕುಟುಂಬದವರ ಜೊತೆ ಬ್ಯಾಕಾಂಕ್​ಗೆ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿ ಅವರಿಗೆ ಹೃದಯಾಘಾತವಾಯಿತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಪ್ರಯೋಜನ ಆಗಿಲ್ಲ. ಆಗಸ್ಟ್ 9ರಂದು ಹರಿಶ್ಚಂದ್ರಘಾಟ್​​ನಲ್ಲಿ ಸ್ಪಂದನಾ ಅಂತ್ಯಕ್ರಿಯೆ ಮಾಡಾಯಿತು. ಆಗಸ್ಟ್ 11ರಂದು ಹಾಲುತುಪ್ಪ ಬಿಟ್ಟು, ಅಸ್ಥಿಯನ್ನು ತೆಗೆದುಕೊಂಡು ಹೋಗಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More