ಸಮಾಧಿ ಮೇಲೆ ಸ್ಪಂದನಾ ಇಷ್ಟದ ತಿಂಡಿ-ತಿನಿಸು ಇಟ್ಟ ಕುಟುಂಬ; ಭಾವುಕರಾಗಿ ನಿಂತ ವಿಜಯ್

Updated on: Aug 11, 2023 | 12:14 PM

ಕುಟುಂಬದವರು ಸ್ಪಂದನಾ ಸಮಾಧಿಗೆ ಪೂಜೆ ಮಾಡಿದ್ದಾರೆ. ಅವರಿಷ್ಟದ ತಿಂಡಿ-ತಿನಿಸುಗಳನ್ನು ಸಮಾಧಿ ಎದುರು ಇಡಲಾಗಿದೆ. ಪೂಜೆ ಬಳಿಕ ಕುಟುಂಬ ಶ್ರೀರಂಗಪಟ್ಟಣಕ್ಕೆ ತೆರಳಲಿದೆ. ಕಾವೇರಿ ನದಿಯಲ್ಲಿ ಸ್ಪಂದನಾ ಅಸ್ಥಿ ವಿಸರ್ಜನೆ ಮಾಡಲಾಗುತ್ತದೆ. ಕುಟುಂಬದ 50 ಜನರು ಇಲ್ಲಿಗೆ ತೆರಳಲಿದ್ದಾರೆ.

ಸ್ಪಂದನಾ (Spandana) ಅವರ ಅಂತ್ಯಸಂಸ್ಕಾರ ನೆರವೇರಿ ಇಂದಿಗೆ (ಆಗಸ್ಟ್ 11) ಮೂರು ದಿನ ಕಳೆದಿದೆ. ಅವರಿಲ್ಲ ಎಂಬ ಸತ್ಯವನ್ನು ಕುಟುಂಬದವರ ಬಳಿ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ನೋವಿನಲ್ಲಿ ಕುಟುಂಬದವರು ಸ್ಪಂದನಾ ಸಮಾಧಿಗೆ ಪೂಜೆ ಮಾಡಿದ್ದಾರೆ. ಅವರಿಷ್ಟದ ತಿಂಡಿ-ತಿನಿಸುಗಳನ್ನು ಸಮಾಧಿ ಎದುರು ಇಡಲಾಗಿದೆ. ಪೂಜೆ ಬಳಿಕ ಕುಟುಂಬ ಶ್ರೀರಂಗಪಟ್ಟಣಕ್ಕೆ ತೆರಳಲಿದೆ. ಕಾವೇರಿ ನದಿಯಲ್ಲಿ ಸ್ಪಂದನಾ ಅಸ್ಥಿ ವಿಸರ್ಜನೆ ಮಾಡಲಾಗುತ್ತದೆ. ಕುಟುಂಬದ 50 ಜನರು ಇಲ್ಲಿಗೆ ತೆರಳಲಿದ್ದಾರೆ. ಬ್ಯಾಂಕಾಕ್​​ನಲ್ಲಿ ಸ್ಪಂದನಾ ನಿಧನ ಹೊಂದಿದರು. ಅವರಿಗೆ ಹೃದಯಾಘಾತ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More