ಸ್ಪಂದನ ವಿಜಯ್ ಸಾವು ಅತ್ಯಂತ ಅನಿರೀಕ್ಷಿತ ಮತ್ತು ಆಘಾತಕಾರಿ: ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Aug 07, 2023 | 2:03 PM

ಕೋವಿಡ್ ಮಹಾಮಾರಿ ಮನುಕುಲದಲ್ಲಿ ಹಾಹಾಕಾರ ಸೃಷ್ಟಿಸಿದ ಬಳಿಕ ಚಿಕ್ಕ ವಯಸ್ಸಿನ ಜನ ಹಾರ್ಟ್ ಅಟ್ಯಾಕ್ ಗೆ ಒಳಗಾಗುತ್ತಿರೋದು ಸಾಮಾನ್ಯವಾಗಿ ಬಿಟ್ಟಿದೆ ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರು: ಸ್ಪಂದನ ವಿಜಯ್ (Spandana Vijay) ಪತಿ ವಿಜಯರಾಘವೇಂದ್ರ ಜೊತೆ ಕೇವಲ 16 ವರ್ಷಗಳ ದಾಂಪತ್ಯದ ಬಳಿಕ ಅವರನ್ನು ಅಗಲಿದ್ದಾರೆ. ಸ್ಪಂದನ ಅವರ ಆಘಾತಕಾರಿ ಸಾವಿಗೆ ಗಣ್ಯರು ಶೋಕ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ನಿರ್ಮಾಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಧುರೀಣ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಶೋಕ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಸ್ಪಂದನ ಸಾವು ಅತ್ಯಂತ ಅನಿರೀಕ್ಷಿತ (unexpected) ಮತ್ತು ಆಘಾತಕಾರಿ (shocking) ಎಂದು ಹೇಳಿದರು. ವಿಜಯರಾಘವೇಂದ್ರ ಕುಟುಂಬ ಅಪಾರ ದುಃಖದಲ್ಲಿದೆ, ಚಿಕ್ಕ ವಯಸ್ಸಿನಲ್ಲೇ ಸ್ಪಂದನ ಹೃದಯಾಘಾಕ್ಕೊಳಗಾದ ಬಗ್ಗೆ ಆತಂಕ ವ್ಯಕ್ತಪಡಿಸಿದ ಕುಮಾರಸ್ವಾಮಿ, ಕೋವಿಡ್ ಮಹಾಮಾರಿ ಮನುಕುಲದಲ್ಲಿ ಹಾಹಾಕಾರ ಸೃಷ್ಟಿಸಿದ ಬಳಿಕ ಚಿಕ್ಕ ವಯಸ್ಸಿನ ಜನ ಹಾರ್ಟ್ ಅಟ್ಯಾಕ್ ಗೆ ಒಳಗಾಗುತ್ತಿರೋದು ಸಾಮಾನ್ಯವಾಗಿ ಬಿಟ್ಟಿದೆ, ಜನ ಅದರಲ್ಲೂ ವಿಶೇಷವಾಗಿ ಕೋರೋನಾ ಸೋಂಕಿನಿಂದ ಬಳಲಿದವರು ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಅಂತ ಸಲಹೆ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.