Assembly Session: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ವಾಕ್ಸಮರ ಹೆಚ್ಚಿದಾಗ ಸದನವನ್ನು ಮುಂದೂಡಿದ ಸ್ಪೀಕರ್ ಯುಟಿ ಖಾದರ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 19, 2023 | 2:25 PM

ಬಿಜೆಪಿ ನಾಯಕರು ವಾದ ಮಾಡುತ್ತಲೇ ಸದನದ ಬಾವಿಗಿಳಿದಾಗ ಸ್ಪೀಕರ್ 10 ನಿಮಿಷಗಳ ಕಾಲ ಸದನವನ್ನು ಮುಂದೂಡುತ್ತಾರೆ.

ಬೆಂಗಳೂರು: ನಿನ್ನೆಯಂತೆ ಇವತ್ತು ಕೂಡ ಸದನದಲ್ಲಿ ಕಡಿಮೆ ಸಂಖ್ಯೆ ಸದಸ್ಯರಿದ್ದರು. ಆದರೆ ಆಡಳಿತ (ruling) ಮತ್ತು ವಿರೋಧ ಪಕ್ಷದ ನಾಯಕರ (opposition leaders) ಮಾತಿನ ಚಕಮಕಿ ನಡೆದು ಸದನ ರಣರಂಗವಾಗಿ ಮಾರ್ಪಟ್ಟಿತು. ವಿಷಯವೊಂದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಆರ್ ಅಶೋಕ, ಸುನೀಲ್ ಕುಮಾರ್, ಪ್ರಭು ಚೌಹಾನ್ ಮತ್ತು ಸುರೇಶ್ ಕುಮಾರ್ ಸರ್ಕಾರವನ್ನು ಪ್ರಶ್ನಿಸಲಾರಂಭಿಸಿದಾಗ ಸಚಿವರು- ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಕೆಜೆ ಜಾರ್ಜ್ ತೀವ್ರ ಆಕ್ಷೇಪಣೆ ಸಲ್ಲಿಸುತ್ತಾರೆ. ಯಾವುದೇ ವಿಷಯವನ್ನು ನೋಟೀಸ್ ನೀಡದೆ ಪ್ರಸ್ತಾಪಿಸುವುದು ನಿಯಾಮಾವಳಗಳಲ್ಲಿ ಅವಕಾಶವಿಲ್ಲ ಎಂದು ಸಚಿವರುಗಳು ಹೇಳುತ್ತಾರೆ. ಅದೇ ಮಾತನ್ನು ಪುನರುಚ್ಛರಿಸುವ ಸಭಾಪತಿ ಯುಟಿ ಖಾದರ್ (Speaker UT Khader) ನೋಟೀಸ್ ಕೊಟ್ಟು ಮಾತಾಡಿ ಎಂದು ಬಿಜೆಪಿ ನಾಯಕರಿಗೆ ಸೂಚಿಸುತ್ತಾರೆ. ಅಲ್ಲಿಂದ ಗಲಾಟೆ ಮತ್ತಷ್ಟು ಜೋರು ಹಿಡಿಯುತ್ತದೆ. ಯಾರು ಏನು ಮಾತಾಡುತ್ತಿದ್ದಾರೆ ಅನ್ನೋದು ಗೊತ್ತಾಗದಷ್ಟು ಗದ್ದಲ ಸದನದಲ್ಲಿ ಉಂಟಾಗುತ್ತದೆ. ಬಿಜೆಪಿ ನಾಯಕರು ವಾದ ಮಾಡುತ್ತಲೇ ಸದನದ ಬಾವಿಗಿಳಿದಾಗ ಸ್ಪೀಕರ್ 10 ನಿಮಿಷಗಳ ಕಾಲ ಸದನವನ್ನು ಮುಂದೂಡುತ್ತಾರೆ.
.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.