Karnataka Budget session: ಸಭಾಧ್ಯಕ್ಷನ ಪೀಠಕ್ಕೆ ಅಗೌರವ, 18 ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿದ ಸ್ಪೀಕರ್ ಯುಟಿ ಖಾದರ್

Updated on: Mar 21, 2025 | 5:46 PM

ಸಭಾಧ್ಯಕ್ಷ ಖಾದರ್ ಸದಸ್ಯರನ್ನು ಸಸ್ಪೆಂಡ್ ಮಾಡುವ ಮೊದಲು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ಬಿಜೆಪಿ ಶಾಸಕರು ತಮ್ಮ ವರ್ತನೆಯಿಂದ ಸ್ಪೀಕರ್ ಸ್ಥಾನಕ್ಕೆ ಅಗೌರವ ತಂದಿದ್ದಾರೆ, ಅವರ ವರ್ತನೆಯನ್ನು ಸದನ ಕ್ಷಮಿಸುವುದು ಸಾಧ್ಯವಿಲ್ಲ, ಅವರನ್ನು ಸಸ್ಪೆಂಡ್ ಮಾಡಬೇಕೆಂದು ಪ್ರಸ್ತಾವನೆಯನ್ನು ಸಲ್ಲಿಸುತ್ತಾರೆ. ನಂತರ ಖಾದರ್ ಶಾಸಕರ ಹೆಸರುಗಳನ್ನು ಓದಿ ವಜಾ ಮಾಡಿರುವುದಾಗಿ ಘೋಷಿಸುತ್ತಾರೆ.

ಬೆಂಗಳೂರು, ಮಾರ್ಚ್ 21: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಸೇರಿದಂತೆ ಬಿಜೆಪಿಯ 18 ಶಾಸಕರನ್ನು ಸಭಾಧ್ಯಕ್ಷ ಯುಟಿ ಖಾದರ್ 6 ತಿಂಗಳು ಅವಧಿಗೆ ಸದನದಿಂದ ವಜಾ ಮಾಡಿದರು. ಅಂದರೆ ಈ ಶಾಸಕರು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುವ ಅವಕಾಶದಿಂದ ವಂಚಿತರಾಗುತ್ತಾರೆ. ದೊಡ್ಡನಗೌಡ ಪಾಟೀಲ್, ಅಶ್ವತ್ಥ್ ನಾರಾಯಣ, ಭರತ್ ಶೆಟ್ಟಿ, ಶರಣು ಸಲಗರ, ಬಿ ಸುರೇಶ್ ಗೌಡ, ಮುನಿರತ್ನ, ಚನ್ನಬಸಪ್ಪ, ಉಮಾನಾಥ ಕೋಟ್ಯಾನ್, ಬಿಪಿ ಹರೀಶ್, ಧೀರಜ್ ಮುನಿರಾಜು, ಶೈಲೇಂದ್ರ ಬೆಲ್ದಾಳೆ, ಬಸವರಾಜ ಮತ್ತಿಮೂಡ, ಎಸ್​ ಆರ್ ವಿಶ್ವನಾಥ್​, ಯಶ್​​ಪಾಲ್ ಎ ಸುವರ್ಣ, ಎಂಆರ್ ಪಾಟೀಲ್, ಸಿಕೆ ರಾಮಮೂರ್ತಿ, ಡಾ ಚಂದ್ರು ಲಮಾಣಿ, ಬಿಎ ಬಸವರಾಜು ಮೊದಲಾದವರನ್ನು ಸಸ್ಟೆಂಡ್ ಮಾಡಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Karnataka Budget Session: ಸ್ಪೀಕರ್ ಯುಟಿ ಖಾದರ್ ಮತ್ತು ಶಾಸಕ ಸುನೀಲ ಕುಮಾರ ತುಳು ಭಾಷೆಯಲ್ಲಿ ಮಾತಾಡಿದಾಗ ಸದನ ಕಕ್ಕಾಬಿಕ್ಕಿ!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More