ಸಿಎಂ ನವೀನ್ ಪಟ್ನಾಯಕ್ ಆರೋಗ್ಯದ ತನಿಖೆಗೆ ವಿಶೇಷ ಸಮಿತಿ ರಚನೆ; ಪ್ರಧಾನಿ ಮೋದಿ

ಒಡಿಶಾದಲ್ಲಿ ಚುನಾವಣಾ ಪ್ರಚಾರದ ವೇಳೆ ಸಿಎಂ ನವೀನ್ ಪಟ್ನಾಯಕ್ (ನವೀನ್ ಬಾಬು) ಅವರ ಆರೋಗ್ಯದ ಬಗ್ಗೆ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ ನವೀನ್ ಬಾಬು ಅವರ ಆರೋಗ್ಯದ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಅವರ ಆರೋಗ್ಯದ ಹಿಂದೆ ಯಾರದಾದರೂ ಷಡ್ಯಂತ್ರವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಸಿಎಂ ನವೀನ್ ಪಟ್ನಾಯಕ್ ಆರೋಗ್ಯದ ತನಿಖೆಗೆ ವಿಶೇಷ ಸಮಿತಿ ರಚನೆ; ಪ್ರಧಾನಿ ಮೋದಿ
|

Updated on:May 29, 2024 | 4:16 PM

ಒಡಿಶಾದಲ್ಲಿ (Odisha) ಚುನಾವಣಾ ಪ್ರಚಾರದಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik Health) ಅವರ ಆರೋಗ್ಯದ ಬಗ್ಗೆ ಮಾತನಾಡಿದ್ದಾರೆ. ಹದಗೆಟ್ಟಿರುವ ನವೀನ್ ಬಾಬು ಅವರ ಆರೋಗ್ಯದ ಬಗ್ಗೆ ತನಿಖೆ ನಡೆಸಲು ಜೂನ್ 10ರ ನಂತರ ವಿಶೇಷ ಸಮಿತಿಯನ್ನು ರಚಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಚುನಾವಣಾ ರ್ಯಾಲಿಯಲ್ಲಿ ಸಿಎಂ ಆಪ್ತ ಮತ್ತು ಬಿಜೆಡಿ ನಾಯಕ ವಿಕೆ ಪಾಂಡಿಯನ್ ನಡುಗುತ್ತಿರುವ ಕೈ ಹಿಡಿದ ವಿಡಿಯೋ ವೈರಲ್ ಆಗಿದ್ದು, ಒಡಿಶಾ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಈ ಬಗ್ಗೆ ವಿಚಾರಣೆ ನಡೆಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಒಡಿಶಾದ ಮಯೂರ್‌ಭಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇತ್ತೀಚಿನ ದಿನಗಳಲ್ಲಿ ನವೀನ್ ಬಾಬು ಅವರ ಎಲ್ಲಾ ಹಿತೈಷಿಗಳು ತುಂಬಾ ಚಿಂತಿತರಾಗಿದ್ದಾರೆ. ಕಳೆದ ವರ್ಷ ನವೀನ್ ಬಾಬು ಅವರ ಆರೋಗ್ಯವು ಹೇಗೆ ಹದಗೆಟ್ಟಿದೆ ಎಂಬುದನ್ನು ನೋಡಿ ಅವರು ತುಂಬಾ ಚಿಂತಿತರಾಗಿದ್ದಾರೆ. ನವೀನ್ ಬಾಬು ಅವರ ಆಪ್ತರು ನನ್ನನ್ನು ಭೇಟಿಯಾದಾಗಲೆಲ್ಲಾ ನವೀನ್ ಬಾಬು ಅವರ ಆರೋಗ್ಯದ ಬಗ್ಗೆ ಚರ್ಚಿಸುತ್ತಾರೆ. ನವೀನ್ ಬಾಬು ಅವರು ಸ್ವಂತವಾಗಿ ಏನನ್ನೂ ಮಾಡಲು ಸಾಧ್ಯವಿಲ್ಲ, ಅವರು ಎಲ್ಲದಕ್ಕೂ ಬೇರೆಯವರ ಮೇಲೆ ಅವಲಂಬಿತರಾಗಬೇಕಾಗಿದೆ. ನವೀನ್ ಬಾಬು ಅವರ ಅನಾರೋಗ್ಯದ ಹಿಂದೆ ಕೆಲವರ ಷಡ್ಯಂತ್ರವಿದೆ ಎಂಬ ಅನುಮಾನ ನಮಗಿದೆ ಎಂದು ಮೋದಿ ಹೇಳಿದ್ದಾರೆ.

ನವೀನ್ ಬಾಬು ಅವರ ಅನಾರೋಗ್ಯದ ಹಿಂದೆ ಏನಾದರೂ ಷಡ್ಯಂತ್ರವಿದೆಯೇ? ಇದನ್ನು ತಿಳಿಯುವುದು ಒಡಿಶಾದ ಜನರ ಹಕ್ಕು. ನವೀನ್ ಪಟ್ನಾಯಕ್ ಹೆಸರಿನಲ್ಲಿ ತೆರೆಮರೆಯಲ್ಲಿ ಒಡಿಶಾದಲ್ಲಿ ಅಧಿಕಾರ ಅನುಭವಿಸುತ್ತಿರುವವರ ಲಾಬಿಯ ಕೈವಾಡ ಇದರಲ್ಲಿ ಇದೆಯೇ ಎಂಬುದು ಪ್ರಶ್ನೆ. ಈ ನಿಗೂಢವನ್ನು ಬಯಲಿಗೆಳೆಯುವುದು ಮುಖ್ಯವಾದ್ದರಿಂದ ಜೂನ್ 10ರಂದು ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ನವೀನ್ ಬಾಬು ಅವರ ಆರೋಗ್ಯ ಏಕಾಏಕಿ ಹದಗೆಡಲು ಕಾರಣವೇನು ಎಂದು ತನಿಖೆ ನಡೆಸಲಿದೆ ಎಂದಿದ್ದಾರೆ

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:16 pm, Wed, 29 May 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್