ಪ್ರಧಾನಿ ಮೋದಿಗಾಗಿ ಸಿದ್ಧವಾದ ನಾಲ್ವಡಿ ಒಡೆಯರ್ ಮಾದರಿ ಪೇಟದ ವಿಶೇಷಗಳೇನು ಗೊತ್ತಾ? ಇಲ್ಲಿದೆ ನೋಡಿ

Edited By:

Updated on: Apr 14, 2026 | 9:17 AM

ಪ್ರಧಾನಿ ನರೇಂದ್ರ ಮೋದಿ ಅವರ ಮಂಡ್ಯ ಭೇಟಿಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿಯ ವಿಶೇಷ ಮೈಸೂರು ಪೇಟ ಸಿದ್ಧವಾಗಿದೆ. ಮೈಸೂರಿನ ಕಲಾವಿದ ನಂದನ್ ಸಿಂಗ್ ಈ ರಾಜಲಾಂಛನ ಗಂಡಭೇರುಂಡ ವಿನ್ಯಾಸದ ಪೇಟವನ್ನು ತಯಾರಿಸಿದ್ದಾರೆ. ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಇದನ್ನು ಪ್ರಧಾನಿಗಳಿಗೆ ಸಮರ್ಪಿಸಲಿದ್ದಾರೆ. ಇದರಿಂದ ನಾಡಿನ ಸಂಸ್ಕೃತಿಯ ಅನಾವರಣವಾಗಲಿದೆ.

ಮೈಸೂರು, ಏಪ್ರಿಲ್ 14: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆಯಲಿರುವ ಭೈರವೈಕ್ಯ ಮಂದಿರ ಲೋಕಾರ್ಪಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಮೈಸೂರು ಪೇಟ ಧರಿಸಿ ಗಮನ ಸೆಳೆಯಲಿದ್ದಾರೆ. ಮೈಸೂರಿನ ಹೆಸರಾಂತ ಕಲಾವಿದ ನಂದನ್ ಸಿಂಗ್ ಅವರು ಪ್ರಧಾನಿಗಾಗಿಯೇ ಈ ಪೇಟವನ್ನು ಸಿದ್ಧಪಡಿಸಿದ್ದಾರೆ. ಇದರ ತಯಾರಿಗೆ ಐದು ದಿನಗಳ ಕಾಲ ತಗಲಿದೆ. ಬನಾರಸ್ ಬಟ್ಟೆ ಹಾಗೂ ವಿಶೇಷ ಮೋಲ್ಡ್ ಬಳಸಿ ತಯಾರಿಸಿರುವ ಈ ಪೇಟವು, ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ಶೈಲಿಯಲ್ಲಿದೆ. ಪೇಟದ ಮಧ್ಯಭಾಗದಲ್ಲಿ ರಾಜ ಲಾಂಛನ ‘ಗಂಡಭೇರುಂಡ’ ವಿನ್ಯಾಸವನ್ನು ಅಳವಡಿಸಲಾಗಿದ್ದು, ‘ನಮ್ಮೂರು ನಮ್ಮೋರು’ ಸೇವಾ ಸಂಸ್ಥೆಯ ಮೂಲಕ ಪ್ರಧಾನಿಗಳಿಗೆ ಇದನ್ನು ಅರ್ಪಿಸಲಾಗುತ್ತಿದೆ. ನಿರ್ಮಲಾನಂದನಾಥ ಶ್ರೀಗಳ ಮಾರ್ಗದರ್ಶನದಲ್ಲಿ ಈ ಕಲಾಕೃತಿ ಮೂಡಿಬಂದಿದೆ. ಪೇಟ ತಯಾರಿಸಿದ ಕಲಾವಿದ ನಂದನ್ ಹಾಗೂ ಟ್ರಸ್ಟ್ ಸದಸ್ಯರ ಜೊತೆ ಟಿವಿ9 ಮೈಸೂರು ಪ್ರತಿನಿಧಿ ರಾಮ್ ನಡೆಸಿರುವ ಮಾತುಕತೆ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us