AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Polls; ಮಾಧ್ಯಮ ಪ್ರತಿನಿಧಿಗಳಿಗೂ ಈ ಬಾರಿ ಮತ ಚಲಾಯಿಸಲು ವಿಶೇಷ ಸೌಲಭ್ಯ: ಮನೋಜ್ ಕುಮಾರ್ ಮೀನಾ, ಮುಖ್ಯ ಚುನಾವಣಾಧಿಕಾರಿ

Assembly Polls; ಮಾಧ್ಯಮ ಪ್ರತಿನಿಧಿಗಳಿಗೂ ಈ ಬಾರಿ ಮತ ಚಲಾಯಿಸಲು ವಿಶೇಷ ಸೌಲಭ್ಯ: ಮನೋಜ್ ಕುಮಾರ್ ಮೀನಾ, ಮುಖ್ಯ ಚುನಾವಣಾಧಿಕಾರಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 29, 2023 | 5:11 PM

Share

ಮತ ಚಲಾಯಿಸಬಯಸುವ ಪತ್ರಕರ್ತರು ರಾಜ್ಯ ಚುನಾವಣಾ ಕಚೇರಿಯಿಂದ ಮಾನ್ಯತೆ (ಅಕ್ರೆಡಿಟೇಶನ್) ಪಡೆದುಕೊಂಡಿರಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದರು.

ಬೆಂಗಳೂರು: ರಾಷ್ಟ್ರೀಯ ಚುನಾವಣಾ ಅಯೋಗ (Election Commission) ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಿಸಿದ ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಹ ಒಂದು ಪತ್ರಿಕಾ ಗೋಷ್ಟಿ ನಡೆಸಿದರು. ಚುನಾವಣಾ ನೀತಿ ಸಂಹಿತೆ (Model Code of Conduct) ಇಂದಿನಿಂದ ಜಾರಿಗೊಂಡಿರುವುದರಿಂದ ರಾಜಕಾರಣಿಗಳ ಕಾರ್ಯಭಾರ ಇಂದು ಕೊನೆಗೊಂಡಿದೆ. ಇನ್ನು ಮೇಲೆ ಮಂತ್ರಿಗಳು ಮತ್ತು ಶಾಸಕರು ಸರ್ಕಾರಿ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ರಾಜಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ (Manoj Kumar Meena) ಹೇಳಿದರು. ಚುನಾವಣಾ ಆಯೋಗ ಈಗ ಮಾಧ್ಯಮವನ್ನು ಅಗತ್ಯ ಸೇವೆಗಳ ಶ್ರೇಣಿಯಲ್ಲಿ ಸೇರಿಸುವುದರಿಂದ ಪತ್ರಕರ್ತರಿಗೆ ಮತದಾನ ಮಾಡಲು ವಿಶೇಷ ಸೌಲಭ್ಯ ಕಲ್ಪಿಸಲಾಗುವುದು ಎಂದು ಮೀನಾ ಹೇಳಿದರು. ಆದರೆ ಮತ ಚಲಾಯಿಸಬಯಸುವ ಪತ್ರಕರ್ತರು ರಾಜ್ಯ ಚುನಾವಣಾ ಕಚೇರಿಯಿಂದ ಮಾನ್ಯತೆ (ಅಕ್ರೆಡಿಟೇಶನ್) ಪಡೆದುಕೊಂಡಿರಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.