Assembly Polls; ಮಾಧ್ಯಮ ಪ್ರತಿನಿಧಿಗಳಿಗೂ ಈ ಬಾರಿ ಮತ ಚಲಾಯಿಸಲು ವಿಶೇಷ ಸೌಲಭ್ಯ: ಮನೋಜ್ ಕುಮಾರ್ ಮೀನಾ, ಮುಖ್ಯ ಚುನಾವಣಾಧಿಕಾರಿ
ಮತ ಚಲಾಯಿಸಬಯಸುವ ಪತ್ರಕರ್ತರು ರಾಜ್ಯ ಚುನಾವಣಾ ಕಚೇರಿಯಿಂದ ಮಾನ್ಯತೆ (ಅಕ್ರೆಡಿಟೇಶನ್) ಪಡೆದುಕೊಂಡಿರಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದರು.
ಬೆಂಗಳೂರು: ರಾಷ್ಟ್ರೀಯ ಚುನಾವಣಾ ಅಯೋಗ (Election Commission) ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಿಸಿದ ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಹ ಒಂದು ಪತ್ರಿಕಾ ಗೋಷ್ಟಿ ನಡೆಸಿದರು. ಚುನಾವಣಾ ನೀತಿ ಸಂಹಿತೆ (Model Code of Conduct) ಇಂದಿನಿಂದ ಜಾರಿಗೊಂಡಿರುವುದರಿಂದ ರಾಜಕಾರಣಿಗಳ ಕಾರ್ಯಭಾರ ಇಂದು ಕೊನೆಗೊಂಡಿದೆ. ಇನ್ನು ಮೇಲೆ ಮಂತ್ರಿಗಳು ಮತ್ತು ಶಾಸಕರು ಸರ್ಕಾರಿ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ರಾಜಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ (Manoj Kumar Meena) ಹೇಳಿದರು. ಚುನಾವಣಾ ಆಯೋಗ ಈಗ ಮಾಧ್ಯಮವನ್ನು ಅಗತ್ಯ ಸೇವೆಗಳ ಶ್ರೇಣಿಯಲ್ಲಿ ಸೇರಿಸುವುದರಿಂದ ಪತ್ರಕರ್ತರಿಗೆ ಮತದಾನ ಮಾಡಲು ವಿಶೇಷ ಸೌಲಭ್ಯ ಕಲ್ಪಿಸಲಾಗುವುದು ಎಂದು ಮೀನಾ ಹೇಳಿದರು. ಆದರೆ ಮತ ಚಲಾಯಿಸಬಯಸುವ ಪತ್ರಕರ್ತರು ರಾಜ್ಯ ಚುನಾವಣಾ ಕಚೇರಿಯಿಂದ ಮಾನ್ಯತೆ (ಅಕ್ರೆಡಿಟೇಶನ್) ಪಡೆದುಕೊಂಡಿರಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
