‘ಅವನ ನಟನೆ ನೋಡೋದೇ ಆನಂದ’; ಜೀ ಕನ್ನಡ ವೇದಿಕೆ ಮೇಲೆ ರಾಕೇಶ್ ಪೂಜಾರಿಗೆ ವಿಶೇಷ ಗೌರವ
‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿನ್ನರ್ ರಾಕೇಶ್ ಪೂಜಾರಿ ಅವರು ನಿಧನ ಹೊಂದಿದ್ದಾರೆ. ಹಾರ್ಟ್ ಅಟ್ಯಾಕ್ನಿಂದ ಅವರ ಜೀವನ ಕೊನೆ ಆಗಿದೆ. ಅವರಿಗೆ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿನ್ನರ್ ಹಾಗೂ ‘ಕಾಂತಾರ: ಚಾಪ್ಟರ್ 1’ ನಟ ರಾಕೇಶ್ ಪೂಜಾರಿ (Rakesh Poojary) ಅವರು ಇತ್ತೀಚೆಗೆ ನಿಧನ ಹೊಂದಿದರು. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಜೀ ಕನ್ನಡ ವಾಹಿನಿ ಜೊತೆ ಒಳ್ಳೆಯ ಒಡನಾಟ ಹೊಂದಿದ್ದರು. ಈ ವಾಹಿನಿಯ ವಿವಿಧ ಶೋಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದರು. ಈಗ ಅವರ ಮರಣದ ಹಿನ್ನೆಲೆಯಲ್ಲಿ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಈ ವೇಳೆ ಎಲ್ಲರೂ ಕಣ್ಣೀರು ಹಾಕಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us