‘ಅವನ ನಟನೆ ನೋಡೋದೇ ಆನಂದ’; ಜೀ ಕನ್ನಡ ವೇದಿಕೆ ಮೇಲೆ ರಾಕೇಶ್ ಪೂಜಾರಿಗೆ ವಿಶೇಷ ಗೌರವ

Updated on: May 22, 2025 | 8:56 AM

‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿನ್ನರ್ ರಾಕೇಶ್ ಪೂಜಾರಿ ಅವರು ನಿಧನ ಹೊಂದಿದ್ದಾರೆ. ಹಾರ್ಟ್ ಅಟ್ಯಾಕ್​ನಿಂದ ಅವರ ಜೀವನ ಕೊನೆ ಆಗಿದೆ. ಅವರಿಗೆ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿನ್ನರ್ ಹಾಗೂ ‘ಕಾಂತಾರ: ಚಾಪ್ಟರ್ 1’ ನಟ ರಾಕೇಶ್ ಪೂಜಾರಿ (Rakesh Poojary) ಅವರು ಇತ್ತೀಚೆಗೆ ನಿಧನ ಹೊಂದಿದರು. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಜೀ ಕನ್ನಡ ವಾಹಿನಿ ಜೊತೆ ಒಳ್ಳೆಯ ಒಡನಾಟ ಹೊಂದಿದ್ದರು. ಈ ವಾಹಿನಿಯ ವಿವಿಧ ಶೋಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದರು. ಈಗ ಅವರ ಮರಣದ ಹಿನ್ನೆಲೆಯಲ್ಲಿ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಈ ವೇಳೆ ಎಲ್ಲರೂ ಕಣ್ಣೀರು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.