ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭಕ್ತರಿಗೆ ದೇವಿ ದರ್ಶನದ ಅವಕಾಶ

ಅರುಣ್​ ಕುಮಾರ್​ ಬೆಳ್ಳಿ

Updated on: Aug 25, 2023 | 11:21 AM

ದೇವಸ್ಥಾನದ ಅರ್ಚಕರು ಮಹಾಲಕ್ಷ್ಮಿ ದೇವಿಗೆ ಹಾಲು, ತುಪ್ಪ, ಮೊಸರು, ಎಳೆನೀರು ಮತ್ತು ನೀರಿನಿಂದ ಪಂಚಾಭಿಷೇಕ ಮಾಡಿದ್ದ್ದಾರೆ. ಪಂಚಾಭಿಷೇಕದ ನಂತರವೇ ಭಕ್ರರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಸುಕಿನಲ್ಲೇ ಜನ ಬಂದು ದೇವಿಯ ದರ್ಶನ ಪಡೆಯಲಾರಂಭಿಸಿದ್ದರು. ಪೋಷಕರು ಮಕ್ಕಳನ್ನು ಕರೆದುಕೊಂಡು ದೇವಸ್ಥಾನಕ್ಕೆ ಬರುತ್ತಿದ್ದಾರೆ.

ಬೆಂಗಳೂರು: ರಾಜ್ಯದಾದ್ಯಂತ ಇಂದು ವರಮಹಾಲಕ್ಷ್ಮಿ ಹಬ್ಬವನ್ನು (Varamahalakshmi Habba) ಸಂಭ್ರಮ ಸಡಗರಗಳಿಂದ ಆಚರಿಸಲಾಗುತ್ತೆ. ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜಾದಿನವಾಗಿದ್ದರೂ, ಗೃಹಿಣುಯರು (homemakers) ಬೆಳಗ್ಗೆ ಬೇಗ ಎದ್ದು ಹಬ್ಬದ ತಯಾರಿಯಲ್ಲಿ ತೊಡಗಿದ್ದಾರೆ. ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ (Mahalakshmi layout) ವರಮಹಾಲಕ್ಷ್ಮಿ ದೇವಸ್ಥಾನದಲ್ಲಿ (Varamahalakshmi Temple) ಬೆಳಗ್ಗೆ 5 ಗಂಟೆಯಿಂದ ಪೂಜಾ ಕೈಂಕರ್ಯಗಳು ಶುರುವಾಗಿವೆ. ಈ ದೇವಸ್ಥಾನ ಬಹಳ ಪ್ರಸಿದ್ಧಿ ಹೊಂದಿರುವ ದೇವಸ್ಥಾನವಾಗಿದೆ, ಅಸಲಿಗೆ ದೇವಸ್ಥಾನದಿಂದಾಗೇ ಈ ಪ್ರದೇಶಕ್ಕೆ ಮಹಾಲಕ್ಷ್ಮಿ ಲೇಔಟ್ ಹೆಸರಿಡಲಾಗಿದೆ. ದೇವಸ್ಥಾನದ ಅರ್ಚಕರು ಮಹಾಲಕ್ಷ್ಮಿ ದೇವಿಗೆ ಹಾಲು, ತುಪ್ಪ, ಮೊಸರು, ಎಳೆನೀರು ಮತ್ತು ನೀರಿನಿಂದ ಪಂಚಾಭಿಷೇಕ ಮಾಡಿದ್ದ್ದಾರೆ. ಪಂಚಾಭಿಷೇಕದ ನಂತರವೇ ಭಕ್ರರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಸುಕಿನಲ್ಲೇ ಜನ ಬಂದು ದೇವಿಯ ದರ್ಶನ ಪಡೆಯಲಾರಂಭಿಸಿದ್ದರು. ಪೋಷಕರು ಮಕ್ಕಳನ್ನು ಕರೆದುಕೊಂಡು ದೇವಸ್ಥಾನಕ್ಕೆ ಬರುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.