ದಾವಣಗೆರೆಯ ಹೆಬ್ಬಾಳ ಟೋಲ್ ಗೇಟ್ ಬಳಿ ನಿಶ್ಚಲ ಲಾರಿಗೆ ಗುದ್ದಿದ ಕಾರು, ಯಾವುದೇ ಪ್ರಾಣಾಪಾಯವಿಲ್ಲ
ರಾಜ್ಯಾದ್ಯಂತ ಲಾರಿ ಮುಷ್ಕರ ನಡೆಯುತ್ತಿರುವ ಕಾರಣ ಮಹಾರಾಷ್ಟ್ರದಿಂದ ಆಗಮಿಸಿದ್ದ ಲಾರಿಯನ್ನು ಹೆಬ್ಬಾಳದ ಟೋಲ್ ಪ್ಲಾಜಾ ಬಳಿ ತಡೆದು ನಿಲ್ಲಿಸಲಾಗಿತ್ತು. ನಾವು ಯಾವಾಗಲೂ ಹೇಳುವಂತೆ ರಸ್ತೆ ಅಪಘಾತಗಳು ಬೆಳಗಿನ ಜಾವ ಹೆಚ್ಚು ಸಂಭವಿಸುತ್ತವೆ. ರಾತ್ರಿಯೆಲ್ಲ ವಾಹನಗಳನ್ನು ಓಡಿಸಿದ ಚಾಲಕರಿಗೆ ಬೆಳಗಿನ ಜಾವ ನಿದ್ರೆಯ ಮಂಪರು ಆವರಿಸಿರುತ್ತದೆ, ಕೊಂಚ ಯಾಮಾರಿದರೆ ಅಪಾಯ ತಪ್ಪಿದ್ದಲ್ಲ.
ದಾವಣಗೆರೆ, ಏಪ್ರಿಲ್ 17: ಕಳೆದ ರಾತ್ರಿ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿರುವ (Pune-Bengaluru National Highway) ದಾವಣಗೆರೆ ತಾಲೂಕಿನ ಹೆಬ್ಬಾಳದ ಟೋಲ್ ಗೇಟ್ ಬಳಿ ಅಪಘಾತವೊಂದು ಸಂಭವಿಸಿದ್ದು ಅದೃಷ್ಟವಶಾತ್ ಪ್ರಾಣಾಪಾಯ ಜರುಗಿಲ್ಲ. ಟೋಲ್ ಗೇಟ್ ಬಳಿ ನಿಂತಿದ್ದ ಲಾರಿಯೊಂದಕ್ಕೆ ಕಾರು ಢಿಕ್ಕಿ ಹೊಡೆದಿದೆ. ಪ್ರಾಯಶಃ ಕಾರಿನ ಚಾಲಕ ನಿದ್ರೆಯ ಮಂಪರಿನಲ್ಲಿದ್ದಿರಬೇಕು. ಚಿತ್ರದುರ್ಗ ಜಿಲ್ಲೆಯ ಕ್ಯಾಷಾಪುರ ನಿವಾಸಿ ಪ್ರದೀಪ್ ಕಾರು ಓಡಿಸುತ್ತಿದ್ದರು ಅಂತ ಗೊತ್ತಾಗಿದ್ದು ಚಿಕ್ಕ ಪುಟ್ಟ ಗಾಯಗಳಿಂದ ಅವರು ಪಾರಾಗಿದ್ದಾರೆ.
ಇದನ್ನೂ ಓದಿ: ದೇವನಹಳ್ಳಿಯ ಕನ್ನಮಂಗಲಪಾಳ್ಯ ಗೇಟ್ ಬಳಿ ಮಿನಿಬಸ್-ಲಾರಿ ನಡುವೆ ಅಪಘಾತ, 7-8 ಜನರಿಗೆ ಗಾಯ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 17, 2025 10:23 AM
Latest Videos

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್

ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ

ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ

ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
