PM Narendra Modi’s visit to Mandya: ಸಮಾವೇಶ ನಡೆಯುವ ಸ್ಥಳದಲ್ಲಿ ಎಸ್​ಪಿಜಿಯಿಂದ ವೈಮಾನಿಕ ಸಮೀಕ್ಷೆ

ಅರುಣ್​ ಕುಮಾರ್​ ಬೆಳ್ಳಿ

Updated on: Mar 11, 2023 | 11:14 AM

ಹೆದ್ದಾರಿಯನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ಮೋದಿ ಒಂದು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದು ಭದ್ರತಾ ದೃಷ್ಟಿಯಿಂದ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ತಂಡವೊಂದು ಹೆಲಿಕಾಪ್ಟರ್ ಮೂಲಕ ಸ್ಥಳದ ಪರಿಶೀಲನೆ ನಡೆಸುತ್ತಿದೆ.

ಮಂಡ್ಯ: ಬೆಂಗಳೂರು-ಮೈಸೂರು ನಡುವೆ ಹೊಸದಾಗಿ ಸಿದ್ಧಗೊಂಡಿರುವ ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ನಾಳೆ (ರವಿವಾರ) ಸಕ್ಕರೆನಾಡು ಮಂಡ್ಯಗೆ (Mandya) ಆಗಮಿಸಲಿದ್ದಾರೆ. ಹೆದ್ದಾರಿಯನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ಮೋದಿ ಒಂದು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದು ಸಿದ್ಧತೆಗಳು ಭರದಿಂದ ಸಾಗಿವೆ. ಭದ್ರತಾ ದೃಷ್ಟಿಯಿಂದ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ (SPG) ತಂಡವೊಂದು ಹೆಲಿಕಾಪ್ಟರ್ ಮೂಲಕ ಸಮಾವೇಶ ನಡೆಯುವ ಸ್ಥಳದ ಪರಿಶೀಲನೆ ನಡೆಸುತ್ತಿದೆ. ಕಾರ್ಯಕ್ರಮವು ಮಂಡ್ಯದ ಗೆಜ್ಜಲಗೆರೆಯಲ್ಲಿ ನಡೆಯಲಿದ್ದು ಅದರ ಸುತ್ತಮುತ್ತಲಿನ ಎತ್ತರದ ಕಟ್ಟಡ ಮತ್ತು ಗೋಪುರಗಳ ವೈಮಾನಿಕ ಪರಿಶೀಲನೆಯನ್ನು ಎಸ್ ಪಿ ಜಿ ನಡೆಸುತ್ತಿರುವುದು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 11, 2023 10:24 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.