ಕುಮಾರಸ್ವಾಮಿ ಚೇತರಿಸಿಕೊಂಡಿದ್ದಾರೆ, ತುಂಬಾ ಹೊತ್ತು ಅವರೊಂದಿಗೆ ಮಾತಾಡಿದೆ: ಯುಟಿ ಖಾದರ್, ವಿಧಾನ ಸಭಾಧ್ಯಕ್ಷರು

ಅರುಣ್​ ಕುಮಾರ್​ ಬೆಳ್ಳಿ

Updated on: Sep 01, 2023 | 2:59 PM

ಗಣ್ಯರೊಬ್ಬರು ಅನಾರೋಗ್ಯದಿಂದ ಬಳಲಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುವಾಗ ಅವರಿಗೆ ವಿಶ್ರಾಂತಿ ಬೇಕು ಅಂತ ವೈದ್ಯರು ಹೇಳುತ್ತ್ತಾರೆ. ಆದರೆ ರೋಗಿ ಗಣ್ಯವ್ಯಕ್ತಿಯಾಗಿರುವುದರಿಂದ ಬೇರೆ ಗಣ್ಯರು ಭೇಟಿಯಾಗಲು, ಬೇಗ ಚೇತರಿಸಿಕೊಳ್ಳುವಂತೆ ಹಾರೈಸಲಿ ಬರುತ್ತಲೇ ಇರುತ್ತಾರೆ. ಅದು ಪದ್ಧತಿ ಮಾರಾಯ್ರೇ, ಯಾರೇನೂ ಮಾಡಲಾಗದು.

ಬೆಂಗಳೂರು: ವಿಧಾನ ಸಭಾಧ್ಯಕ್ಷ ಯುಟಿ ಖಾದರ್ (UT Khader) ಇಂದು ನಗರದ ಜಯನಗರದಲ್ಲಿರುವ ಅಪೊಲ್ಲೋ ಆಸ್ಪತ್ರೆಯಲ್ಲಿ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರನ್ನು (HD Kumaraswamy) ಬೇಟಿಯಾಗಿ ಆರೋಗ್ಯ ವಿಚಾರಿಸಿದರು. ನಂತರ ಆಸ್ಪತ್ರೆ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕುಮಾರಸ್ವಾಮಿ ಗುಣಮುಖರಾಗಿದ್ದಾರೆ (recovered) ಮತ್ತು ಚೇತರಿಸಿಕೊಂಡಿದ್ದಾರೆ. ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಎಂದರು. ರಾಜ್ಯದ ಎಲ್ಲ ಕನ್ನಡಿಗರ ಆಶೀರ್ವಾದ ಅವರ ಮೇಲಿದೆ, ಬಹಳ ಹೊತ್ತು ಅವರೊಂದಿಗೆ ಮಾತಾಡಿರುವುದಾಗಿ ಖಾದರ್ ಹೇಳಿದರು. ಪತ್ರಕರ್ತೆಯೊಬ್ಬರು ಯಾವಾಗ ಡಿಸ್ಚಾರ್ಜ್ ಮಾಡುತ್ತಾರೆ ಅಂತ ಕೇಳಿದ ಪ್ರಶ್ನೆಗೆ ಖಾದರ್, ಡಿಸ್ಚಾರ್ಜ್ ಮಾಡೋದನ್ನು ತಾನು ಹೇಗೆ ಹೇಳಲಾಗುತ್ತೆ? ವೈದ್ಯರು ಅದನ್ನು ನಿರ್ಧರಿಸುತ್ತಾರೆ ಅಂತ ನಗುತ್ತಾ ಹೇಳಿದರು. ಗಣ್ಯರೊಬ್ಬರು ಅನಾರೋಗ್ಯದಿಂದ ಬಳಲಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುವಾಗ ಅವರಿಗೆ ವಿಶ್ರಾಂತಿ ಬೇಕು ಅಂತ ವೈದ್ಯರು ಹೇಳುತ್ತ್ತಾರೆ. ಆದರೆ ರೋಗಿ ಗಣ್ಯವ್ಯಕ್ತಿಯಾಗಿರುವುದರಿಂದ ಬೇರೆ ಗಣ್ಯರು ಭೇಟಿಯಾಗಲು, ಬೇಗ ಚೇತರಿಸಿಕೊಳ್ಳುವಂತೆ ಹಾರೈಸಲಿ ಬರುತ್ತಲೇ ಇರುತ್ತಾರೆ. ಅದು ಪದ್ಧತಿ ಮಾರಾಯ್ರೇ, ಯಾರೇನೂ ಮಾಡಲಾಗದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.