AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಮತ್ತು ಡಾ ಸಿಎನ್ ಮಂಜುನಾಥ್ ವಿರುದ್ಧ ಗೋಮಾಳ ಕಬಳಿಕೆ ಆರೋಪ ಮಾಡಿದ ಎಸ್ ಆರ್ ಹಿರೇಮಠ

ಕುಮಾರಸ್ವಾಮಿ ಮತ್ತು ಡಾ ಸಿಎನ್ ಮಂಜುನಾಥ್ ವಿರುದ್ಧ ಗೋಮಾಳ ಕಬಳಿಕೆ ಆರೋಪ ಮಾಡಿದ ಎಸ್ ಆರ್ ಹಿರೇಮಠ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 06, 2025 | 8:28 PM

Share

ರಾಜಕಾರಣದಲ್ಲಿ ಪ್ರಭಾವಿಗಳೆನಿಸಿಕೊಂಡವರಿಂದ ಎಗ್ಗಿಲ್ಲದೆ ಭೂಕಬಳಿಕೆ ನಡೆಯುತ್ತಿದೆ ಎಂದು ಎಸ್ ಅರ್ ಹಿರೇಮಠ ಹೇಳುತ್ತಾರೆ. ಡಾ ಸಿಎನ್ ಮಂಜುನಾಥ್ ಅವರು ಸಂಸದ ಅಂತ ಪತ್ರಕರ್ತರೊಬ್ಬರು ಹೇಳಿದಾಗ, ಹಿರೇಮಠ ಅಲ್ಲ, ಅವರು ಕುಮಾರಸ್ವಾಮಿಯವರ ತಂಗಿ ಗಂಡ ಅನ್ನುತ್ತಾರೆ. ಅಂದರೆ ಹಿರೇಮಠ ಅವರಿಗೆ ಮಂಜುನಾಥ್ ಒಬ್ಬ ಸಂಸದ ಅನ್ನೋದು ಗೊತ್ತಿಲ್ಲವೇ?

ಕೊಪ್ಪಳ: ಕೆಲ ತಿಂಗಳುಗಳಿಂದ ನಾಪತ್ತೆಯಾದಂತಿದ್ದ ಸಾಮಜಿಕ ಕಾರ್ಯಕರ್ತ ಎಸ್ ಅರ್ ಹಿರೇಮಠ ಧುತ್ತನೆ ಪ್ರತ್ಯಕ್ಷರಾಗಿದ್ದಾರೆ. ಅವರು ಯಾವಾಗಲೂ ಗಂಭೀರವಾದ ಪ್ರಕರಣಗಳನ್ನು ತೆಗೆದುಕೊಂಡೇ ಮಾಧ್ಯಮಗಳ ಮುಂದೆ ಬರುತ್ತಾರೆ. ಅವರ ಈಗಿನ ಆರೋಪವೇನೆಂದರೆ ರಾಮನಗರ ಜಿಲ್ಲೆ ಬಿಡದಿ ಹೋಬಳಿ ವ್ಯಾಪ್ತಿಗೆ ಬರುವ ಕೇತಗಾನಹಳ್ಳಿಯಲ್ಲಿ 71 ಎಕರೆ ಗೋಮಾಳ ಜಮೀನನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅವರ ತಾಯಿಯ ಸಹೋದರಿ, ಸಂಸದ ಡಾ ಸಿಎನ್ ಮಂಜುನಾಥ್, ಮದ್ದೂರು ಶಾಸಕರಾಗಿದ್ದ ಡಿಸಿ ತಮ್ಮಣ್ಣ, ಅವರ ಪತ್ನಿ ಪ್ರಮೀಳಾ, ನಂಜುಂಡಯ್ಯ, ಸುನಂದಾ ಮೊದಲಾದವರು ಕಬಳಿಸಿದ್ದಾರೆ. ಸ್ಥಳೀಯರ ಬೆಂಬಲವಿದ್ದರೆ ಮಾತ್ರ ತಾನು ಪ್ರಕರಣವನ್ನು ಕೈಗೆತ್ತಿಕೊಂಡು ಹೋರಾಡುತ್ತೇನೆ ಎಂದು ಹಿರೇಮಠ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ: ತನಿಖೆಗೆ ಎಸ್​ಐಟಿ ರಚನೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.