Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ದರ್ಶನ್ ಬಗ್ಗೆ ಕೇಳಿದ್ದಕ್ಕೆ ನೋ ರಿಯಾಕ್ಷನ್ ಎಂದ ನಟಿ ಶ್ರೀಲೀಲಾ

Sreeleela: ದರ್ಶನ್ ಬಗ್ಗೆ ಕೇಳಿದ್ದಕ್ಕೆ ನೋ ರಿಯಾಕ್ಷನ್ ಎಂದ ನಟಿ ಶ್ರೀಲೀಲಾ

ರಾಜೇಶ್ ದುಗ್ಗುಮನೆ
|

Updated on: Jun 21, 2024 | 12:11 PM

ಸೆಲೆಬ್ರಿಟಿಗಳಿಗೆ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಳಲಾಗುತ್ತಿದೆ. ಈಗ ನಟಿ ಶ್ರೀಲೀಲಾ ಅವರಿಗೂ ಇದೇ ರೀತಿಯ ಪ್ರಶ್ನೆ ಎದುರಾಗಿದೆ. ಅವರು ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಲ್ಲಿ ಯೋಗ ಮಾಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಸ್ಯಾಂಡಲ್​​ವುಡ್ ಸೆಲೆಬ್ರಿಟಿಗಳು ಎಲ್ಲೇ ಹೋದರು ಅವರಿಗೆ ದರ್ಶನ್ (Darshan) ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಳಲಾಗುತ್ತಿದೆ. ಈಗ ನಟಿ ಶ್ರೀಲೀಲಾ ಅವರಿಗೂ ಇದೇ ರೀತಿಯ ಪ್ರಶ್ನೆ ಎದುರಾಗಿದೆ. ಅವರು ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಲ್ಲಿ ಯೋಗ ಮಾಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ‘ದರ್ಶನ್ ಕೇಸ್ ಬಗ್ಗೆ ಹೇಳಿ’ ಎಂದು ಅವರಿಗೆ ಕೇಳಲಾಗಿದೆ. ಇದಕ್ಕೆ ಉತ್ತರಿಸೋಕೆ ನಿರಾಕರಿಸಿದ್ದಾರೆ. ‘ಯೋಗ ದಿನಾಚರಣೆ ಬಗ್ಗೆ ಮಾತ್ರ ಕೇಳಿ’ ಎಂದಷ್ಟೇ ಅವರು ಹೇಳಿಕೆ ನೀಡುವುದರಿಂದ ತಪ್ಪಿಸಿಕೊಂಡಿದ್ದಾರೆ. ಸದ್ಯ ಶ್ರೀಲೀಲಾ ಅವರು ತೆಲುಗು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.