AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೀಟ್ ಪರೀಕ್ಷಾ ಅಕ್ರಮ; 'ಹಕ್ಕುಗಳಿಗಾಗಿ ಹೋರಾಡಿ, ಆದರೆ ವಿವೇಚನೆ ಕಳೆದುಕೊಳ್ಳಬೇಡಿ' - ರವಿಶಂಕರ್ ಗುರೂಜಿ

Video: ನೀಟ್ ಪರೀಕ್ಷಾ ಅಕ್ರಮ; ‘ಹಕ್ಕುಗಳಿಗಾಗಿ ಹೋರಾಡಿ, ಆದರೆ ವಿವೇಚನೆ ಕಳೆದುಕೊಳ್ಳಬೇಡಿ’ – ರವಿಶಂಕರ್ ಗುರೂಜಿ

ಅಕ್ಷತಾ ವರ್ಕಾಡಿ
|

Updated on: Jul 25, 2026 | 12:19 PM

Share

ನೀಟ್-ಯುಜಿ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಶ್ರೀ ಶ್ರೀ ರವಿಶಂಕರ್ ಗುರೂಜಿ ಮಾತನಾಡಿದ್ದಾರೆ. ಪ್ರತಿಭಟನೆ ಹಕ್ಕು ಸಮಂಜಸವಾದರೂ, ಆವೇಶದಲ್ಲಿ ವಿವೇಚನೆ ಕಳೆದುಕೊಳ್ಳಬಾರದೆಂದಿದ್ದಾರೆ. ಅಸಾಮಾಜಿಕ ಶಕ್ತಿಗಳ ದುರುಪಯೋಗದ ಬಗ್ಗೆ ಎಚ್ಚರಿಸಿರುವ ಅವರು, ಯಾವುದೇ ಸಮಸ್ಯೆಗೂ ಸರ್ಕಾರದೊಂದಿಗೆ ಶಾಂತಿಯುತ ಮಾತುಕತೆಯ ಮೂಲಕವೇ ಪರಿಹಾರ ಕಂಡುಕೊಳ್ಳಬೇಕು ಎಂದು ಯುವಜನತೆಗೆ ಸಂಯಮದಿಂದ ವರ್ತಿಸಲು ಮನವಿ ಮಾಡಿದ್ದಾರೆ.

ದೆಹಲಿ, ಜು.25: ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿರುವ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತಿರುವ ಆಕ್ರೋಶದ ಕುರಿತು ಪ್ರತಿಕ್ರಿಯಿಸಿರುವ ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು, ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿರುವುದು ಸಮಂಜಸವಾಗಿದ್ದರೂ, ಆವೇಶದ ನಡುವೆ ವಿವೇಚನೆ ಮತ್ತು ಸಮಾಧಾನವನ್ನು ಕಳೆದುಕೊಳ್ಳಬಾರದೆಂದು ಕರೆ ನೀಡಿದ್ದಾರೆ. ಪ್ರತಿಭಟನೆಗಳ ಸನ್ನಿವೇಶವನ್ನು ಅಸಾಮಾಜಿಕ ಹಾಗೂ ದೇಶವಿರೋಧಿ ಶಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುವ ಅಪಾಯವಿರುವುದರಿಂದ ಪ್ರತಿಯೊಬ್ಬರೂ ಅತ್ಯಂತ ಜಾಗರೂಕರಾಗಿರಬೇಕು ಎಂದು ಅವರು ಎಚ್ಚರಿಸಿದ್ದಾರೆ. ಯಾವುದೇ ಸಮಸ್ಯೆಯಾಗಿದ್ದರೂ ಸರ್ಕಾರದೊಂದಿಗೆ ಶಾಂತಿಯುತ ಮಾತುಕತೆಯ ಮೂಲಕವೇ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಆದ್ದರಿಂದ ಯುವಜನತೆ ಆಕ್ರೋಶದ ರಭಸದಲ್ಲಿ ಅಶಾಂತಿಗೆ ಆಸ್ಪದ ನೀಡದೆ ಸಂಯಮದಿಂದ ಶಾಂತಿಯುತ ಮಾರ್ಗವನ್ನು ಅನುಸರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​​ ಮಾಡಿ

Follow Us