AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: 16 ಪ್ರಕರಣಗಳ ಆರೋಪಿ ಶ್ರೀಕಾಂತ್ ಪೂಜಾರಿ ಕರಸೇವಕನಲ್ಲ, ಕರಸೇವಕರ ಹೆಸರಿಗೆ ಕಳಂಕ: ಎಂಬಿ ಪಾಟೀಲ್

ಖರ್ಗೆ ಪುನಃ ಎದ್ದುನಿಂತು, ಪೂಜಾರಿ ವಿರುದ್ಧ ಸುಲಿಗ, ವಂಚನೆ ಪ್ರಕರಣಗಳಿವೆ, ಅವನು ಜೂಜುಕೋರ ಮತ್ತು ಮಟ್ಕಾ ದಂಧೆಯಲ್ಲಿ ಭಾಗಿಯಾಗಿದ್ದವನು, ಅಂಥವನ್ನು ನೀವು ಕರಸೇವಕ ಅಂತ ಕರೆದರೆ ತಮಗೇನು ಅಭ್ಯಂತರವಿಲ್ಲ ಅಂತ ಹೇಳುತ್ತಾ ಕರಸೇವಕನ ವ್ಯಾಖ್ಯಾನ ಏನು ಅನ್ನೋದನ್ನು ಬಿಜೆಪಿ ನಾಯಕರು ಹೇಳಬೇಕು ಅನ್ನುತ್ತಾರೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 14, 2024 | 2:09 PM

Share

ಬೆಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಚರ್ಚೆ ಶುರುವಾದಾಗ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಬಿರುಸಿನ ವಾಗ್ವಾದ ನಡೆಯಿತು. ವಿರೋಧ ಪಕ್ಷದ ಆರ್ ಅಶೋಕ (R Ashoka) ಅವರು ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತ ಮತ್ತು ಕರಸೇವಕ ಶ್ರೀಕಾಂತ್ ಪೂಜಾರಿ (Srikanth Pujari) ಹೆಸರು ಪ್ರಸ್ತಾಪ ಮಾಡುತ್ತಲೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಅವನು ಕರಸೇವಕ ಅಲ್ಲ ಅನ್ನುತ್ತಾರೆ. ಕೂಡಲೇ ಎದ್ದು ನಿಂತು ಮಾತಾಡುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪೂಜಾರಿಯನ್ನು ಅರೆಸ್ಟ್ ಮಾಡಿದ್ದು 31 ವರ್ಷಗಳ ಹಿಂದಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ, ಬೇರೆ ಪ್ರಕರಣಗಳಲ್ಲಿ ಅರೆಸ್ಟ್ ಮಾಡಿಸಿದ್ದರೆ ತಮ್ಮ ಅಭ್ಯಂತರವಿರುತ್ತಿರಲಿಲ್ಲ ಎನ್ನುತ್ತಾರೆ. ಸಚಿವ ಎಂಬಿ ಪಾಟೀಲ್, ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವನನ್ನು ಕರಸೇವಕ, ರಾಮ ಭಕ್ತ ಅನ್ನುತ್ತೀರಲ್ಲ? ಅವನು ಕರಸೇವಕರಿಗೆ ಕಳಂಕ, ಅಪಮಾನ ಅನ್ನುತ್ತಾರೆ.

ಖರ್ಗೆ ಪುನಃ ಎದ್ದುನಿಂತು, ಪೂಜಾರಿ ವಿರುದ್ಧ ಸುಲಿಗ, ವಂಚನೆ ಪ್ರಕರಣಗಳಿವೆ, ಅವನು ಜೂಜುಕೋರ ಮತ್ತು ಮಟ್ಕಾ ದಂಧೆಯಲ್ಲಿ ಭಾಗಿಯಾಗಿದ್ದವನು, ಅಂಥವನ್ನು ನೀವು ಕರಸೇವಕ ಅಂತ ಕರೆದರೆ ತಮಗೇನು ಅಭ್ಯಂತರವಿಲ್ಲ ಅಂತ ಹೇಳುತ್ತಾ ಕರಸೇವಕನ ವ್ಯಾಖ್ಯಾನ ಏನು ಅನ್ನೋದನ್ನು ಬಿಜೆಪಿ ನಾಯಕರು ಹೇಳಬೇಕು ಅನ್ನುತ್ತಾರೆ. ಕಾಂಗ್ರೆಸ್ ಶಾಸಕಿ ನಯನ ಮೋಟಮ್ಮ ಶ್ರೀಕಾಂತ್ ಪೂಜಾರಿಯನ್ನು ಸಮರ್ಥಿಸಿಕೊಳ್ಳುವವರಿಗೆ ನಾಚಿಕೆಯಾಗಬೇಕು ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್