AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: 16 ಪ್ರಕರಣಗಳ ಆರೋಪಿ ಶ್ರೀಕಾಂತ್ ಪೂಜಾರಿ ಕರಸೇವಕನಲ್ಲ, ಕರಸೇವಕರ ಹೆಸರಿಗೆ ಕಳಂಕ: ಎಂಬಿ ಪಾಟೀಲ್

ಖರ್ಗೆ ಪುನಃ ಎದ್ದುನಿಂತು, ಪೂಜಾರಿ ವಿರುದ್ಧ ಸುಲಿಗ, ವಂಚನೆ ಪ್ರಕರಣಗಳಿವೆ, ಅವನು ಜೂಜುಕೋರ ಮತ್ತು ಮಟ್ಕಾ ದಂಧೆಯಲ್ಲಿ ಭಾಗಿಯಾಗಿದ್ದವನು, ಅಂಥವನ್ನು ನೀವು ಕರಸೇವಕ ಅಂತ ಕರೆದರೆ ತಮಗೇನು ಅಭ್ಯಂತರವಿಲ್ಲ ಅಂತ ಹೇಳುತ್ತಾ ಕರಸೇವಕನ ವ್ಯಾಖ್ಯಾನ ಏನು ಅನ್ನೋದನ್ನು ಬಿಜೆಪಿ ನಾಯಕರು ಹೇಳಬೇಕು ಅನ್ನುತ್ತಾರೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 14, 2024 | 2:09 PM

Share

ಬೆಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಚರ್ಚೆ ಶುರುವಾದಾಗ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಬಿರುಸಿನ ವಾಗ್ವಾದ ನಡೆಯಿತು. ವಿರೋಧ ಪಕ್ಷದ ಆರ್ ಅಶೋಕ (R Ashoka) ಅವರು ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತ ಮತ್ತು ಕರಸೇವಕ ಶ್ರೀಕಾಂತ್ ಪೂಜಾರಿ (Srikanth Pujari) ಹೆಸರು ಪ್ರಸ್ತಾಪ ಮಾಡುತ್ತಲೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಅವನು ಕರಸೇವಕ ಅಲ್ಲ ಅನ್ನುತ್ತಾರೆ. ಕೂಡಲೇ ಎದ್ದು ನಿಂತು ಮಾತಾಡುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪೂಜಾರಿಯನ್ನು ಅರೆಸ್ಟ್ ಮಾಡಿದ್ದು 31 ವರ್ಷಗಳ ಹಿಂದಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ, ಬೇರೆ ಪ್ರಕರಣಗಳಲ್ಲಿ ಅರೆಸ್ಟ್ ಮಾಡಿಸಿದ್ದರೆ ತಮ್ಮ ಅಭ್ಯಂತರವಿರುತ್ತಿರಲಿಲ್ಲ ಎನ್ನುತ್ತಾರೆ. ಸಚಿವ ಎಂಬಿ ಪಾಟೀಲ್, ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವನನ್ನು ಕರಸೇವಕ, ರಾಮ ಭಕ್ತ ಅನ್ನುತ್ತೀರಲ್ಲ? ಅವನು ಕರಸೇವಕರಿಗೆ ಕಳಂಕ, ಅಪಮಾನ ಅನ್ನುತ್ತಾರೆ.

ಖರ್ಗೆ ಪುನಃ ಎದ್ದುನಿಂತು, ಪೂಜಾರಿ ವಿರುದ್ಧ ಸುಲಿಗ, ವಂಚನೆ ಪ್ರಕರಣಗಳಿವೆ, ಅವನು ಜೂಜುಕೋರ ಮತ್ತು ಮಟ್ಕಾ ದಂಧೆಯಲ್ಲಿ ಭಾಗಿಯಾಗಿದ್ದವನು, ಅಂಥವನ್ನು ನೀವು ಕರಸೇವಕ ಅಂತ ಕರೆದರೆ ತಮಗೇನು ಅಭ್ಯಂತರವಿಲ್ಲ ಅಂತ ಹೇಳುತ್ತಾ ಕರಸೇವಕನ ವ್ಯಾಖ್ಯಾನ ಏನು ಅನ್ನೋದನ್ನು ಬಿಜೆಪಿ ನಾಯಕರು ಹೇಳಬೇಕು ಅನ್ನುತ್ತಾರೆ. ಕಾಂಗ್ರೆಸ್ ಶಾಸಕಿ ನಯನ ಮೋಟಮ್ಮ ಶ್ರೀಕಾಂತ್ ಪೂಜಾರಿಯನ್ನು ಸಮರ್ಥಿಸಿಕೊಳ್ಳುವವರಿಗೆ ನಾಚಿಕೆಯಾಗಬೇಕು ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ