AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಕಳೆದುಕೊಂಡ ವಿಜಯ್​ ರಾಘವೇಂದ್ರ ಪುತ್ರ ಶೌರ್ಯನ ಜತೆ ನಿಂತು ಕಾಳಜಿ ತೋರಿದ ಶ್ರೀಮುರಳಿ ಪತ್ನಿ ವಿದ್ಯಾ

ತಾಯಿ ಕಳೆದುಕೊಂಡ ವಿಜಯ್​ ರಾಘವೇಂದ್ರ ಪುತ್ರ ಶೌರ್ಯನ ಜತೆ ನಿಂತು ಕಾಳಜಿ ತೋರಿದ ಶ್ರೀಮುರಳಿ ಪತ್ನಿ ವಿದ್ಯಾ

ಮದನ್​ ಕುಮಾರ್​
|

Updated on: Aug 16, 2023 | 6:13 PM

Share

ಹೃದಯಾಘಾತದಿಂದ ನಿಧನರಾದ ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಉತ್ತರ ಕ್ರಿಯೆ ಇಂದು (ಆಗಸ್ಟ್​ 16) ನಡೆದಿವೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಶಾಂತಿಹೋಮ ನಡೆಯಿತು. ಶ್ರೀಮುರಳಿ ಪತ್ನಿ ವಿದ್ಯಾ ಅವರು ಶೌರ್ಯನ ಜೊತೆ ನಿಂತು ಕಾಳಜಿ ವಹಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಸ್ಪಂದನಾ ವಿಜಯ್​ ರಾಘವೇಂದ್ರ (Spandana Vijay Raghavendra) ಅವರು ಹೃದಯಾಘಾತದಿಂದ ನಿಧನರಾಗಿದ್ದು ಬಹಳ ನೋವಿನ ಸಂಗತಿ. ಸ್ಪಂದನಾ ಅವರ ಅಗಲಿಕೆ ಬಳಿಕ ವಿಜಯ್​ ರಾಘವೇಂದ್ರ (Vijay Raghavendra) ಅವರ ಕುಟುಂಬದಲ್ಲಿ ದುಃಖ ಆವರಿಸಿದೆ. ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ದಂಪತಿಯ ಮಗ ಶೌರ್ಯ ಕೂಡ ಕಣ್ಣೀರು ಹಾಕುತ್ತಿದ್ದಾನೆ. ಇಂದು (ಆಗಸ್ಟ್​ 16) ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಉತ್ತರ ಕ್ರಿಯೆ ನಡೆದಿವೆ. ಈ ವೇಳೆ ಶೌರ್ಯನ ಜೊತೆ ನಿಂತು ಕಾಳಜಿ ವಹಿಸಿದ್ದಾರೆ ಶ್ರೀಮುರಳಿ ಪತ್ನಿ ವಿದ್ಯಾ (Vidya Srimurali). ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಶಾಂತಿಹೋಮ ನಡೆಯಿತು. ಬಳಿಕ ಮಲ್ಲೇಶ್ವರದ ಮೈದಾನದಲ್ಲಿ ಅಭಿಮಾನಿಗಳಿಗೆ ಭೋಜನ ವ್ಯವಸ್ಥೆ ಮಾಡಲಾಯಿತು.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More