Vishnuvardhan: ಸಿಗರೇಟ್ ಸೇದುತ್ತಿದ್ದಾಗ ವಿಷ್ಣುವರ್ಧನ್ ಕೈಲಿ ಸಿಕ್ಕಿ ಬಿದ್ದಿದ್ದ ಶ್ರೀನಗರ ಕಿಟ್ಟಿ

Updated on: Mar 31, 2023 | 8:48 AM

ವಿಷ್ಣುವರ್ಧನ್ ನಟನೆಯ ‘ವಿಷ್ಣು ಸೇನೆ’ ಸಿನಿಮಾದಲ್ಲಿಶ್ರೀನಗರ ಕಿಟ್ಟಿ ಅತಿಥಿ ಪಾತ್ರ ಮಾಡಿದ್ದರು. ಆ ದಿನದ ಘಟನೆಯನ್ನು ಅವರು ನೆನಪು ಮಾಡಿಕೊಂಡಿದ್ದಾರೆ.

ವಿಷ್ಣುವರ್ಧನ್ ನಟನೆಯ ‘ವಿಷ್ಣು ಸೇನೆ’ ಸಿನಿಮಾದಲ್ಲಿ (Vishnu Sene Movie) ಶ್ರೀನಗರ ಕಿಟ್ಟಿ ಅತಿಥಿ ಪಾತ್ರ ಮಾಡಿದ್ದರು. ಆ ದಿನದ ಘಟನೆಯನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ‘ವಿಷ್ಣು ಸೇನೆ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ನಾಗಣ್ಣ ಅವರು ಒಂದು ಪಾತ್ರಕ್ಕೆ ಅವಕಾಶ ಕೊಟ್ರು. ನನ್ನ ಪಾತ್ರ ಬರೋದು ಒಂದೇ ಸಿನ್. ಆದರೆ, ವಿಷ್ಣುವರ್ಧನ್ ಅವರ ಜೊತೆ ನಟಿಸೋಣ ಎಂದು ಒಪ್ಪಿಕೊಂಡೆ. ಶೂಟಿಂಗ್ ಸೆಟ್​ಗೆ ಬಂದು ನಾನು ಸಿಗರೇಟ್ ಸೇದುತ್ತಿದೆ. ಆಗ ವಿಷ್ಣುವರ್ಧನ್ (Vishnuvardhan) ಬಂದರು. ನಾನು ತಕ್ಷಣಕ್ಕೆ ಸಿಗರೇಟ್ ಬೀಸಾಕಿದೆ. ಕಿಟ್ಟಿ ಡೋಂಟ್ ವರಿ ಅಂದ್ರು. ಅವರು ಹೊಸ ಸಿಗರೇಟ್ ಕೊಡಿಸಿದರು’ ಎಂದಿದ್ದಾರೆ ಕಿಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More