ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೂ ಮೊದಲೇ ಮತಗಳಿರುವ ಬಾಕ್ಸ್ ಸೀಲ್ ಓಪನ್ ಆರೋಪ
ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ 1,822 ಅಂಚೆ ಮತಗಳ ಮರು ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್ನ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ವಿರುದ್ಧ 201 ಮತಗಳ ಅಂತರದಿಂದ ಗೆದ್ದಿದ್ದರು. ಜೀವರಾಜ್ ಅವರು ಮರು ಎಣಿಕೆಗೆ ಕೋರ್ಟ್ ಮೊರೆ ಹೋಗಿದ್ದರಿಂದ ಈ ಪ್ರಕ್ರಿಯೆ ಆರಂಭವಾಗಿದೆ.
ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು (ಮೇ 2) ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜಿನಲ್ಲಿ ನಡೆಯುತ್ತಿದೆ. ಕ್ಷೇತ್ರದಲ್ಲಿ ಚಲಾವಣೆಯಾಗಿದ್ದ ಒಟ್ಟು 1,822 ಅಂಚೆ ಮತಗಳನ್ನು ಮರು ಎಣಿಕೆಗೆ ಒಳಪಡಿಸಲಾಗುತ್ತಿದೆ. ಈ ಮರು ಎಣಿಕೆಯು ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ಅವರ ವಿರುದ್ಧ ಜಯಗಳಿಸಿದ್ದರು. ಅವರ ಗೆಲುವಿನ ಅಂತರ ಕೇವಲ 201 ಮತಗಳಾಗಿತ್ತು. ಅತಿ ಕಡಿಮೆ ಮತಗಳ ಅಂತರದಿಂದ ಜಯಗಳಿಸಿದ್ದರಿಂದ, ಬಿಜೆಪಿಯ ಜೀವರಾಜ್ ಅವರು ಅಂಚೆ ಮತಗಳ ಮರು ಎಣಿಕೆಗೆ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಈ ಮರು ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಅಂಚೆ ಮತಗಳ ಮರು ಎಣಿಕೆಗೂ ಮೊದಲೇ ಮತಗಳಿರುವ ಬಾಕ್ಸ್ ಸೀಲ್ ಓಪನ್ ಮಾಡಲಾಗಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಮರು ಮತ ಎಣಿಕೆಗೆ ನನ್ನ ವಿರೋಧವಿದೆ ಎಂದು ಹಾಲಿ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ. ಟ್ಯಾಂಪರ್ ಮಾಡಲಾಗಿದೆ ಎಂಬ ಅನುಮಾನವಿದ್ದು, ಮತಗಳಿರುವ ಬಾಕ್ಸ್ ಓಪನ್ ಆಗಿರುವುದನ್ನು ಹೈಕೋರ್ಟ್ ಗಮನಕ್ಕೆ ತಂದು ಎಣಿಕೆ ಮಾಡಲಿ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

