Chikmagalur News: ಅಪಾಯಕಾರಿ ಸ್ಥಿತಿಯಲ್ಲಿ ಶೃಂಗೇರಿ-ಕಸಳ ಸಂಪರ್ಕ ರಸ್ತೆ, ಭಾಗದ ನಾಯಕರ ನಿರ್ಲಕ್ಷ್ಯ ಗಾಬರಿ ಹುಟ್ಟಿಸುತ್ತದೆ!

ಅರುಣ್​ ಕುಮಾರ್​ ಬೆಳ್ಳಿ

Updated on: Jul 24, 2023 | 11:48 AM

ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವುದರಿಂದ ಜಿಲ್ಲಾಡಳಿತ ಮತ್ತು ಸ್ಥಳೀಯ ರಾಜಕಾರಣಿಗಳು ಕೂಡಲೇ ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗಬೇಕಿದೆ.

ಚಿಕ್ಕಮಗಳೂರು: ಈ ರಸ್ತೆ ಅನಾಹುತ ಸೃಷ್ಟಿಸಲ ಬಾಯ್ದೆರದು ಕೂತಿರೋದು ಈ ಭಾಗದ ರಾಜಕಾರಣಿಗಳನ್ನು (politicians) ಬಿಟ್ಟು ಬೇರೆಲ್ಲರಿಗೂ ಕಾಣಿಸುತ್ತಿದೆ. ಯಾಕೆ ಹೀಗೆ ಹೇಳಬೇಕಾಗಿದೆಯೆಂದರೆ, ರಸ್ತೆಯು ಕಳೆದ ಬಾರಿಯ ಮಳೆಗಾಲದಲ್ಲೇ ಕುಸಿದಿತ್ತು. ಮತ್ತೊಂದು ಮಳೆಗಾಲ (monsoon season) ಬಂದರೂ ರಸ್ತೆಗೆ ಕಾಯಕಲ್ಪ ಕಲ್ಪಿಸಬೇಕೆನ್ನುವ ಯೋಚನೆ ರಾಜಕಾರಣಗಳಿಗೆ ಬಂದಿಲ್ಲ. ಅಂದಹಾಗೆ, ಇದು ಶೃಂಗೇರಿಯಿಂದ ಕಳಸಕ್ಕೆ ಸಂಪರ್ಕ ಒದಗಿಸುವ ಹೆಗ್ಗಾರು ಕುಡಿಗೆ (Heggaru Kudige) ಹೆಸರಿನ ಗ್ರಾಮದ ಬಳಿಯ ರಸ್ತೆ. ಈ ಊರು ಹೊರನಾಡು ಮತ್ತು ಶೃಂಗೇರಿ ಮಧ್ಯಭಾಗದಲ್ಲಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ. ಭಾಗದಲ್ಲಿ ಮಳೆ ಸತತವಾಗಿ ಸುರಿಯುತ್ತಿರುವುದರಿಂದ ರಸ್ತೆ ಯಾವುದೇ ಸಮಯ ಕುಸಿಯುವಂತಿದೆ. ಲೋಕೋಪಯೋಗಿ ಇಲಾಖೆ ಒಳಚರಂಡಿ ವ್ಯವಸ್ಥೆ ಮಾಡದ ಕಾರಣ ರಸ್ತೆಯ ಸ್ಥಿತಿಯ ಹೀಗಾಗಿದೆ ಎಂದು ಒಬ್ಬ ಸ್ಥಳೀಯ ಹೇಳುತ್ತಾರೆ. ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವುದರಿಂದ ಜಿಲ್ಲಾಡಳಿತ ಮತ್ತು ಸ್ಥಳೀಯ ರಾಜಕಾರಣಿಗಳು ಕೂಡಲೇ ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗಬೇಕಿದೆ.

ಮತ್ತಷ್ಟು ವಿಡಿಯೋಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.