ಶೃಂಗೇರಿ ಅಂಚೆ ಮತ ವಿವಾದ: ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್

Edited By:

Updated on: May 11, 2026 | 6:29 PM

ಶೃಂಗೇರಿ (sringeri) ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 'ಯಥಾಸ್ಥಿತಿ' ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದೆ. ಇನ್ನು ಅಂಚೆ ಮತ ಮರು ಎಣಿಕೆ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ ನೀಡಿದ್ದಕ್ಕೆ ರಾಜೇಗೌಡ ಅವರು ಫುಲ್ ಖುಷ್ ಆಗಿದ್ದಾರೆ.

ನವದೆಹಲಿ, (ಮೇ 11): ಶೃಂಗೇರಿ (sringeri) ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ‘ಯಥಾಸ್ಥಿತಿ’ ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದೆ. ಇನ್ನು ಅಂಚೆ ಮತ ಮರು ಎಣಿಕೆ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ ನೀಡಿದ್ದಕ್ಕೆ ರಾಜೇಗೌಡ ಅವರು ಫುಲ್ ಖುಷ್ ಆಗಿದ್ದಾರೆ.

ಈ ಬಗ್ಗೆ ನವದೆದೆಹಲ್ಲಿ ಮಾತನಾಡಿ ರಾಜೇಗೌಡ , ಹೈಕೋರ್ಟ್ ಆದೇಶ ಮತ್ತು ನಂತರದ ಪ್ರಕ್ರಿಯೆಗೆ ತಡೆ ನೀಡಿದ್ದು, ಸುಪ್ರೀಂಕೋರ್ಟ್​ನಲ್ಲಿ‌ ನನಗೆ ನ್ಯಾಯ ಸಿಕ್ಕಿದೆ. ಅಂಚೆ ಮತ ಎಣಿಕೆಯಲ್ಲಿ 2 ಮತ ನನ್ನ ಪರವಾಗಿ ಬಂದಿತ್ತು. ನನ್ನ ಮತಗಳು ಹೆಚ್ಚಾಗುವ ಬದಲು ಕಡಿಮೆ‌ ತೋರಿಸಲಾಗಿತ್ತು. ಈ‌ ಹಂತದಲ್ಲಿ ‌ಅಕ್ರಮವಾಗಿದೆ ಎಂದು ಅನುಮಾನ ಇತ್ತು. ಹೀಗಾಗಿ ನಾನು ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ನ್ಯಾಯ ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ

Follow Us