‘ಮತ್ತಷ್ಟು ಮೇಲಕ್ಕೆ ಎರುತ್ತೀರಿ’; ನಟಿ ಶ್ರೀನಿಧಿ ಶೆಟ್ಟಿಗೆ ಸಿಕ್ತು ದೈವದ ಅಭಯ

Updated on: May 08, 2024 | 8:25 AM

ಮಂಗಳೂರಿನ ಹೊರವಲಯದಲ್ಲಿರೋ ಕಿನ್ನಿಗೋಳಿಯ ತಾಳಿಪಾಡಿ ಗುತ್ತುವಿನಲ್ಲಿ ಈ ಹರಕೆ ನೇಮೋತ್ಸವ ನಡೆದಿದೆ. ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಸಲಾಯಿತು. ಇದರಲ್ಲಿ ಶ್ರೀನಿಧಿ ಶೆಟ್ಟಿ ಹಾಗೂ ಅವರ ಕುಟುಂಬದವರು, ಸಂಬಂಧಿಕರು ಪಾಲ್ಗೊಂಡರು.

ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ‘ಕೆಜಿಎಫ್’​ ಸಿನಿಮಾದಲ್ಲಿ ನಟಿಸಿ ಫೇಮಸ್ ಆದವರು. ಅವರ ಹುಟ್ಟೂರು ಮಂಗಳೂರು. ಅವರು ಹಾಗೂ ಅವರ ಕುಟುಂಬ ದೈವಗಳಿಗೆ ಹೆಚ್ಚು ನಡೆದುಕೊಳ್ಳುತ್ತದೆ. ಹೀಗಾಗಿ ಅವರು ತಮ್ಮ ಕುಟುಂಬದ ದೈವಗಳಿಗೆ ಹೇಳಿಕೊಂಡಿದ್ದ ಹರಕೆಯನ್ನು ತೀರಿಸಿದ್ದಾರೆ. ಮಂಗಳೂರಿನ ಹೊರವಲಯದಲ್ಲಿರೋ ಕಿನ್ನಿಗೋಳಿಯ ತಾಳಿಪಾಡಿ ಗುತ್ತುವಿನಲ್ಲಿ ಈ ಹರಕೆ ನೇಮೋತ್ಸವ ನಡೆದಿದೆ. ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಸಲಾಯಿತು. ಇದರಲ್ಲಿ ಶ್ರೀನಿಧಿ ಶೆಟ್ಟಿ ಹಾಗೂ ಅವರ ಕುಟುಂಬದವರು, ಸಂಬಂಧಿಕರು ಪಾಲ್ಗೊಂಡರು. ತಮ್ಮ ಯಶಸ್ಸಿನ ಹಿಂದೆ ಕುಟುಂಬದ ದೈವಗಳ ಆಶೀರ್ವಾದ ಇದ್ದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಈ ಹರಕೆ ಹೇಳಿಕೊಂಡಿದ್ದರು ಶ್ರೀನಿಧಿ. ‘ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀರಿ’ ಎಂದು ದೈವಗಳು ಇದೇ ಸಂದರ್ಭ ಶ್ರೀನಿಧಿ ‌ಶೆಟ್ಟಿಗೆ ಅಭಯ ನೀಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More