ಶ್ರೀರಾಮುಲು ಕಾರ್ಯಕ್ಷೇತ್ರ ಬಳ್ಳಾರಿಯಾದರೆ ನನ್ನದು ಬೆಳಗಾವಿ: ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 27, 2025 | 3:11 PM

ಒಂದು ವೇಳೆ ಶ್ರೀರಾಮುಲು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಸೇರ್ಪಡೆಗೊಳ್ಳಲು ನಿರ್ಧರಿಸಿದ್ದೇಯಾದರೆ, ಅವರಿಗೆ ಸ್ವಾಗತವಿದೆ, ಆದರೆ ತನ್ನನ್ನು ತುಳಿಯುವುದು ಯಾರಿಂದಲೂ ಸಾಧ್ಯವಿಲ್ಲ, ವಿಷಯ ಯಾವುದೇ ಆಗಿರಲಿ, ತಾನು ಅದನ್ನು ಪಾಸಿಟಿವ್ ದೃಷ್ಟಿಕೋನದಿಂದ ನೋಡುತ್ತೇನೆಯೇ ಹೊರತು ನೆಗೆಟಿವ್ ದೃಷ್ಟಿಕೋನದಿಂದ ಅಲ್ಲ ಎಂದು ಜಾರಕಿಹೊಳಿ ಹೇಳಿದರು.

ಬೆಂಗಳೂರು: ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಅವರು ಬಳ್ಳಾರಿಯ ಪ್ರಭಾವಿ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಗೆ ಕರೆತಂದರೆ ತನ್ನನ್ನು ತುಳಿದಂತೆ ಆಗುವುದಿಲ್ಲ, ಅದೆಲ್ಲ ಊಹಾಪೋಹಗಳು, ಅವರ ಕಾರ್ಯಕ್ಷೇತ್ರ ಬಳ್ಳಾರಿ ಮತ್ತು ತನ್ನದು ಬೆಳಗಾವಿ, ತಮ್ಮ ನಡುವೆ ಕ್ಲ್ಯಾಷ್ ಉಂಟಾಗುವ ಸಂದರ್ಭವೇ ಉಂಟಾಗಲ್ಲ ಎಂದು ಹೇಳಿದರು. ಅಷ್ಟಕ್ಕೂ ಖುದ್ದು ಶ್ರೀರಾಮುಲು ಅವರೇ ಕಾಂಗ್ರೆಸ್ ಗೆ ಬರಲ್ಲ ಅಂತ ಹೇಳಿದ್ದಾರೆ, ಮಾಧ್ಯಮದವರಿಗೆ ಇನ್ನೂ ಸಂಶಯವಿದ್ದರೆ ತನ್ನನ್ನು ಯಾರು ತುಳಿಯಬೇಕೆಂದಿದ್ದಾರೋ ಅವರನ್ನೇ ಈ ಪ್ರಶ್ನೆ ಕೇಳಲಿ ಎಂದು ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಿಕೆ ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ: ಸತೀಶ್ ಜಾರಕಿಹೊಳಿ ದಿಢೀರ್ ಯೂಟರ್ನ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.