ಜನರನ್ನು ನಗಿಸುವುದೇ ‘ಜಿಎಸ್​ಟಿ’ ಉದ್ದೇಶ: ಸೃಜನ್ ಲೋಕೇಶ್

Updated on: Nov 14, 2025 | 7:39 PM

‘ಮಜಾ ಟಾಕೀಸ್’ ಮೂಲಕ ಪ್ರೇಕ್ಷಕರನ್ನು ನಕ್ಕು ನಗಿಸಿದ ಸೃಜನ್ ಲೋಕೇಶ್ ಅವರು ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಅವರ ನಿರ್ದೇಶನದಲ್ಲಿ ‘ಜಿಎಸ್​ಟಿ’ ಸಿನಿಮಾ ಮೂಡಿಬಂದಿದೆ. ಬಿಡುಗಡೆಗೆ ಸಿದ್ಧವಾಗಿರುವ ಈ ಸಿನಿಮಾ ಬಗ್ಗೆ ಅವರು ಮಾತನಾಡಿದ್ದಾರೆ.

‘ಮಜಾ ಟಾಕೀಸ್’ ಮೂಲಕ ಪ್ರೇಕ್ಷಕರನ್ನು ನಕ್ಕು ನಗಿಸಿದ ಸೃಜನ್ ಲೋಕೇಶ್ (Srujan Lokesh) ಅವರು ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಅವರ ನಿರ್ದೇಶನದಲ್ಲಿ ‘ಜಿಎಸ್​ಟಿ’ ಸಿನಿಮಾ (GST Movie) ಮೂಡಿಬಂದಿದೆ. ಬಿಡುಗಡೆಗೆ ಸಿದ್ಧವಾಗಿರುವ ಈ ಸಿನಿಮಾ ಬಗ್ಗೆ ಅವರು ಮಾತನಾಡಿದ್ದಾರೆ. ‘ನಾನೇ ಬರೆದ ಕಥೆ. ನಿರ್ದೇಶನ ಮಾಡುವುದು ಚಾಲೆಂಜಿಂಗ್ ಆಗಿತ್ತು. ಸಿನಿಮಾ ನೋಡಿದಾಗ ಸಮಾಧಾನ ಆಗುತ್ತದೆ. ಜನರನ್ನು ನಗಿಸಬೇಕು ಎಂಬುದು ನನ್ನ ಉದ್ದೇಶ. ಜನರು ನಗದೇ ಇದ್ದರೆ ನಾನು ನನ್ನ ಕೆಲಸಕ್ಕೆ ಸರಿಯಾಗಿ ನ್ಯಾಯ ಕೊಟ್ಟಿಲ್ಲ ಎಂದಾಗುತ್ತದೆ. ಜನರು ಖಂಡಿತಾ ನನ್ನ ಸಿನಿಮಾ ನೋಡಿ ಖುಷಿಪಡುತ್ತಾರೆ ಎಂಬ ನಿರೀಕ್ಷೆ ನನಗೆ ಇದೆ. 2 ಗಂಟೆ 10 ನಿಮಿಷ ಇದೆ. ನಮ್ಮ ಸಿನಿಮಾವನ್ನು ನಾವೇ ಅದ್ಭುತವಾಗಿದೆ ಅಂತ ಹೇಳಿಕೊಳ್ಳುವುದು ಸರಿಯಲ್ಲ. ಜನರು ಸಿನಿಮಾ ನೋಡಲಿ. ಚೆನ್ನಾಗಿದ್ದರೆ ಹೊಗಳಲಿ. ಚೆನ್ನಾಗಿಲ್ಲ ಎಂದರೆ ತಿದ್ದಿಕೊಳ್ಳುತ್ತೇವೆ’ ಎಂದು ಸೃಜನ್ ಲೋಕೇಶ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More