ಕರ್ನಾಟಕದಲ್ಲಿ ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಕಣ್ಣಾಮುಚ್ಚಾಲೆಯಿಂದ ರೈತರು, ವಿದ್ಯಾರ್ಥಿಗಳು ಪರದಾಟ

Updated on: Mar 19, 2025 | 4:50 PM

ಕರ್ನಾಟಕದಲ್ಲಿ ಬೇಸಿಗೆ ಬೆನ್ನಲ್ಲೇ ಅನಿಯಮಿತ ಲೋಡ್‌ ಶೆಡ್ಡಿಂಗ್‌ ಶುರುವಾಗಿದೆ. ದುರಸ್ತಿ, ಕೆಲಸ, ಕಾರ್ಯಗಳ ನೆಪದಲ್ಲಿ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ. ವಿದ್ಯುತ್‌ನ ಕಣ್ಣಾಮುಚ್ಚಾಲೆಯಿಂದ ಗ್ರಾಮೀಣ ಭಾಗದ ರೈತರು ಹಾಗೂ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಒಂದು ಕಡೆ ಕರೆಂಟ್ ಇಲ್ಲದೇ ಬೆಳೆಗೆ ನೀರಿಲ್ಲದೇ ರೈತರು ಒದ್ದಾಡುತ್ತಿದ್ದರೆ, ಮತ್ತೊಂದೆಡೆ ಪರೀಕ್ಷೆ ಬರೆಯಲಿರುವ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಸಹ ಪರದಾಡುವಂತಾಗಿದೆ.

ಬೆಳಗಾವಿ, (ಮಾರ್ಚ್ 19): ಕರ್ನಾಟಕದಲ್ಲಿ ಬೇಸಿಗೆ ಬೆನ್ನಲ್ಲೇ ಅನಿಯಮಿತ ಲೋಡ್‌ ಶೆಡ್ಡಿಂಗ್‌ ಶುರುವಾಗಿದೆ. ದುರಸ್ತಿ, ಕೆಲಸ, ಕಾರ್ಯಗಳ ನೆಪದಲ್ಲಿ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ. ವಿದ್ಯುತ್‌ನ ಕಣ್ಣಾಮುಚ್ಚಾಲೆಯಿಂದ ಗ್ರಾಮೀಣ ಭಾಗದ ರೈತರು ಹಾಗೂ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಒಂದು ಕಡೆ ಕರೆಂಟ್ ಇಲ್ಲದೇ ಬೆಳೆಗೆ ನೀರಿಲ್ಲದೇ ರೈತರು ಒದ್ದಾಡುತ್ತಿದ್ದರೆ, ಮತ್ತೊಂದೆಡೆ ಪರೀಕ್ಷೆ ಬರೆಯಲಿರುವ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಸಹ ಪರದಾಡುವಂತಾಗಿದೆ. ಇದಕ್ಕೆ ಪೂಕರವೆಂಬಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಾಣಂತಿಕೊಡಿ ತೋಟದ ವಸತಿ, ಕೆರೂರ ಕೆಂಪಟ್ಟಿ ವಸತಿ ಪ್ರದೇಶದಲ್ಲಿ ವಿದ್ಯುತ್​ ಇಲ್ಲದೇ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಓದಿಕೊಳ್ಳಲು ಸಮಸ್ಯೆಯಾಗಿದೆ. ವಿದ್ಯುತ್​ ಕೈಕೊಡುತ್ತಿರುವುದರಿಂದ ವಿದ್ಯಾರ್ಥಿಗಳು ಮೇಣದ ಬತ್ತಿ, ಮೊಬೈಲ್ ಟಾರ್ಚ್ ನಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಬಗ್ಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಟಿವಿ9 ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More