ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ

Updated on: Apr 11, 2025 | 7:04 PM

ಒಂದೆಡೆ ಉದ್ಯೋಗ ಅಧಿಸೂಚನೆಗಳ ಅಗತ್ಯವಿಲ್ಲ ಎಂದು ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಹೇಳುತ್ತಾರೆ. ಆದರೆ, ಮತ್ತೊಂದೆಡೆ ಉದ್ಯೋಗಗಳಿಗಾಗಿ ನಿರುದ್ಯೋಗಿಗಳ ಕಾಲ್ತುಳಿತ ಉಂಟಾಗಿದೆ. ವಾರಂಗಲ್​ನ ಮೆಗಾ ಉದ್ಯೋಗ ಮೇಳದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಮೂವರು ನಿರುದ್ಯೋಗಿ ಮಹಿಳೆಯರಿಗೆ ಗಾಯಗಳಾಗಿವೆ. ಸಚಿವರಾದ ಕೊಂಡ ಸುರೇಖಾ ಮತ್ತು ಸೀತಕ್ಕ ಉದ್ಯೋಗ ಮೇಳವನ್ನು ಉದ್ಘಾಟಿಸಿದರು.

ವಾರಂಗಲ್, ಏಪ್ರಿಲ್ 11: ವಾರಂಗಲ್ ನಗರದ ಎನ್.ಕೆ. ನಾಯ್ಡು ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಲಾದ ಉದ್ಯೋಗ ಮೇಳದಲ್ಲಿ ಕಾಲ್ತುಳಿತ ಉಂಟಾಗಿದೆ. ಈ ಘಟನೆಯಲ್ಲಿ ಮೂವರು ಮಹಿಳೆಯರಿಗೆ ಗಾಯಗಳಾಗಿವೆ. ಉದ್ಯೋಗ ಮೇಳಕ್ಕೆ ಸಾವಿರಾರು ನಿರುದ್ಯೋಗಿಗಳು ಸೇರುತ್ತಾರೆ. ಹೋಟೆಲ್‌ನ ಮುಖ್ಯ ದ್ವಾರದ ಬಳಿಯಿದ್ದ ಕನ್ನಡಿ ಒಡೆದು, ಮೂವರು ನಿರುದ್ಯೋಗಿ ಮಹಿಳೆಯರು ಗಾಯಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More