ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ ಕರ್ನಾಟಕ ಅಹಿಂದ ಸಂಘಟನೆ

ಕರ್ನಾಟಕದ ರಾಜ್ಯಪಾಲರು ಬಿಜೆಪಿಯ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ, ರಾಜ್ಯದ ಜನ ಅವರ ವಿರುದ್ಧ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ ಮತ್ತು ರಾಷ್ಟ್ರಪತಿಗಳು ಅವರನ್ನು ಬೇಗ ವಾಪಸ್ಸು ಕರೆಸಿಕೊಳ್ಳದಿದ್ದರೆ ಜನ ದೊಂಬಿ ಏಳಬಹುದು, ಗಲಭೆಗಳು ತಲೆದೋರಬಹುದು ಎಂದು ವೆಂಕಟೇಶ್ ಗೌಡ ಹೇಳಿದರು.

ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ ಕರ್ನಾಟಕ ಅಹಿಂದ ಸಂಘಟನೆ
|

Updated on:Aug 23, 2024 | 3:06 PM

ದೆಹಲಿ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅನುಮತಿ ನೀಡಿರರುವುದನ್ನು ಖಂಡಿಸಿ ಕರ್ನಾಟಕ ಅಹಿಂದ ಸಂಘಟನೆಯು ರಾಷ್ಟ್ರಪತಿಯವರಿಗೆ ದೂರು ಸಲ್ಲಿಸಿದ ಬಳಿಕ ಸಂಘಟನೆಯ ಸಂಚಾಲಕ ವೆಂಕಟೇಶ್ ಗೌಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶ ಕಂಡ ಅಪ್ರತಿಮ ಮತ್ತು ನಿಷ್ಠಾವಂತ ರಾಜಕಾರಣಿಯಾಗಿದ್ದಾರೆ, ಆದರೆ ಅವರ ವಿರುದ್ಧ ಪೊಲೀಸರಾಗಲೀ ಅಥವಾ ತನಿಖಾ ಸಂಸ್ಥೆಗಳಾಗಲೀ ಪ್ರಾಸಿಕ್ಯೂಷನ್ ಅನುಮತಿ ಕೋರಿಲ್ಲವಾದರೂ ರಾಜ್ಯಪಾಲರು ಕೇವಲ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಒತ್ತಡಕ್ಕೆ ಮಣಿದು ಅನುಮತಿಯನ್ನು ನೀಡಿದ್ದಾರೆ ಎಂದು ವೆಂಕಟೇಶ್ ಗೌಡ ಹೇಳಿದರು. ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇಕಡ 80ರಷ್ಟಿರುವ ಅಹಿಂದ ವರ್ಗಗಳ ನೆಚ್ಚಿನ ನಾಯಕರಾಗಿದ್ದಾರೆ, ನಾವೆಲ್ಲ ರಾಜ್ಯಪಾಲರ ವಿರುದ್ಧ ಒಂದು ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಪ್ರತಿಸಲ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ ಎಂದು ಗೌಡ ಹೇಳಿದರು. ಒಬ್ಬ ನಿಷ್ಠಾವಂತ ರಾಜಕಾರಣಿಯ ವಿರುದ್ಧ ಸಂವಿಧಾನಬಾಹಿರವಾಗಿ ವರ್ತಿಸುತ್ತಿರುವ ಕರ್ನಾಟಕದ ರಾಜ್ಯಪಾಲರನ್ನು ಕೂಡಲೇ ವಾಪಸ್ಸು ಕರೆಸಿಕೊಳ್ಳಬೇಕೆಂದು ರಾಷ್ಟ್ರಪತಿಯವರಿಗೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    Siddaramaiah Presser: ನಲ್ವತ್ತಕ್ಕೂ ಹೆಚ್ಚು ವರ್ಷಗಳ ನನ್ನ ರಾಜಕೀಯ ಬದುಕಿನಲ್ಲಿ ಒಂದು ಕಪ್ಪು ಚುಕ್ಕೆಯೂ ಇಲ್ಲ: ಸಿದ್ದರಾಮಯ್ಯ

Published On - 3:05 pm, Fri, 23 August 24

Follow us
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ