Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ ಕರ್ನಾಟಕ ಅಹಿಂದ ಸಂಘಟನೆ

ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ ಕರ್ನಾಟಕ ಅಹಿಂದ ಸಂಘಟನೆ

ಅರುಣ್​ ಕುಮಾರ್​ ಬೆಳ್ಳಿ
|

Updated on:Aug 23, 2024 | 3:06 PM

ಕರ್ನಾಟಕದ ರಾಜ್ಯಪಾಲರು ಬಿಜೆಪಿಯ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ, ರಾಜ್ಯದ ಜನ ಅವರ ವಿರುದ್ಧ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ ಮತ್ತು ರಾಷ್ಟ್ರಪತಿಗಳು ಅವರನ್ನು ಬೇಗ ವಾಪಸ್ಸು ಕರೆಸಿಕೊಳ್ಳದಿದ್ದರೆ ಜನ ದೊಂಬಿ ಏಳಬಹುದು, ಗಲಭೆಗಳು ತಲೆದೋರಬಹುದು ಎಂದು ವೆಂಕಟೇಶ್ ಗೌಡ ಹೇಳಿದರು.

ದೆಹಲಿ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅನುಮತಿ ನೀಡಿರರುವುದನ್ನು ಖಂಡಿಸಿ ಕರ್ನಾಟಕ ಅಹಿಂದ ಸಂಘಟನೆಯು ರಾಷ್ಟ್ರಪತಿಯವರಿಗೆ ದೂರು ಸಲ್ಲಿಸಿದ ಬಳಿಕ ಸಂಘಟನೆಯ ಸಂಚಾಲಕ ವೆಂಕಟೇಶ್ ಗೌಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶ ಕಂಡ ಅಪ್ರತಿಮ ಮತ್ತು ನಿಷ್ಠಾವಂತ ರಾಜಕಾರಣಿಯಾಗಿದ್ದಾರೆ, ಆದರೆ ಅವರ ವಿರುದ್ಧ ಪೊಲೀಸರಾಗಲೀ ಅಥವಾ ತನಿಖಾ ಸಂಸ್ಥೆಗಳಾಗಲೀ ಪ್ರಾಸಿಕ್ಯೂಷನ್ ಅನುಮತಿ ಕೋರಿಲ್ಲವಾದರೂ ರಾಜ್ಯಪಾಲರು ಕೇವಲ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಒತ್ತಡಕ್ಕೆ ಮಣಿದು ಅನುಮತಿಯನ್ನು ನೀಡಿದ್ದಾರೆ ಎಂದು ವೆಂಕಟೇಶ್ ಗೌಡ ಹೇಳಿದರು. ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇಕಡ 80ರಷ್ಟಿರುವ ಅಹಿಂದ ವರ್ಗಗಳ ನೆಚ್ಚಿನ ನಾಯಕರಾಗಿದ್ದಾರೆ, ನಾವೆಲ್ಲ ರಾಜ್ಯಪಾಲರ ವಿರುದ್ಧ ಒಂದು ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಪ್ರತಿಸಲ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ ಎಂದು ಗೌಡ ಹೇಳಿದರು. ಒಬ್ಬ ನಿಷ್ಠಾವಂತ ರಾಜಕಾರಣಿಯ ವಿರುದ್ಧ ಸಂವಿಧಾನಬಾಹಿರವಾಗಿ ವರ್ತಿಸುತ್ತಿರುವ ಕರ್ನಾಟಕದ ರಾಜ್ಯಪಾಲರನ್ನು ಕೂಡಲೇ ವಾಪಸ್ಸು ಕರೆಸಿಕೊಳ್ಳಬೇಕೆಂದು ರಾಷ್ಟ್ರಪತಿಯವರಿಗೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    Siddaramaiah Presser: ನಲ್ವತ್ತಕ್ಕೂ ಹೆಚ್ಚು ವರ್ಷಗಳ ನನ್ನ ರಾಜಕೀಯ ಬದುಕಿನಲ್ಲಿ ಒಂದು ಕಪ್ಪು ಚುಕ್ಕೆಯೂ ಇಲ್ಲ: ಸಿದ್ದರಾಮಯ್ಯ

Published on: Aug 23, 2024 03:05 PM