ಮೊದಲ ದಿನದಿಂದಲೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉತ್ತಮ ನಾಯಕತ್ವದ ಗುಣ ಪ್ರದರ್ಶಿಸುತ್ತಿದ್ದಾರೆ

ಅರುಣ್​ ಕುಮಾರ್​ ಬೆಳ್ಳಿ

Updated on: Nov 11, 2023 | 11:12 AM

ಯಾವುದೇ ಪಕ್ಷ ಸದೃಢವಾಗಬೇಕಾದರೆ ಅದರ ನಾಯಕರು ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಇಟ್ಟಿಕೊಂಡಿರಬೇಕು ಮತ್ತು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದನ್ನು ವಿಜೆಯೇಂದ್ರ ಮಾಡಲಾರಂಭಿಸಿದ್ದಾರೆ. ಉತ್ತಮ ನಾಯಕತ್ವದ ಲಕ್ಷಣವಿದು.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕಟೀಲೋತ್ಸವ ಅಂತ್ಯಗೊಂಡು ವಿಜಯೋತ್ಸವ ಶುರುವಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿವೈ ವಿಜಯೇಂದ್ರ (BY Vijayendra) ಸಮಯ ವ್ಯರ್ಥಮಾಡದೆ ಕೆಲಸ ಶುರುಮಾಡಿದ್ದಾರೆ. ಇಂದು ಬೆಳಗ್ಗೆ ವಿಜಯೇಂದ್ರ ಗಾಂಧಿನಗರ ಕ್ಷೇತ್ರ (Gandhinagar constituency) ಬೂತ್ ನಂಬರ್ 23 ರ ಅಧ್ಯಕ್ಷ ಶಶಿಧರ್ ಮನೆಗೆ ಭೇಟಿ ನೀಡಿ ಅವರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು. ವಿಜಯೇಂದ್ರ ಅವರೊಂದಿಗೆ ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ (PC Mohan) ಮತ್ತು ಪಕ್ಷದ ಹಲವಾರು ಕಾರ್ಯಕರ್ತರಿದ್ದರು. ವಿಜೆಯೇಂದ್ರ ರಾಜಕಾರಣದ ಮೂಲಭೂತ ಅಂಶಗಳನ್ನು ಚೆನ್ನಾಗಿ ಅರಿತುಕೊಂಡಿರುವಂತಿದೆ. ಯಾವುದೇ ಪಕ್ಷ ಸದೃಢವಾಗಬೇಕಾದರೆ ಅದರ ನಾಯಕರು ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಇಟ್ಟಿಕೊಂಡಿರಬೇಕು ಮತ್ತು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದನ್ನು ವಿಜೆಯೇಂದ್ರ ಮಾಡಲಾರಂಭಿಸಿದ್ದಾರೆ. ಉತ್ತಮ ನಾಯಕತ್ವದ ಲಕ್ಷಣವಿದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.