ನಾಡಿನ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪರನ್ನು ಭೇಟಿಯಾಗಿ ಗೌರವ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Nov 20, 2023 | 12:59 PM

ಕಳೆದ ವಾರ ಹೆಚ್ ಡಿ ದೇವೇಗೌಡ, ಎಸ್ ಎಂ ಕೃಷ್ಣ, ಬಸವರಾಜ ಬೊಮ್ಮಾಯಿ ಮೊದಲಾದವರನ್ನು ಭೇಟಿಯಾಗಿದ್ದ ವಿಜಯೇಂದ್ರ ಇಂದು ನಾಡಿನ ಖ್ಯಾತ, ಪದ್ಮಭೂಷಣ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ 92-ವರ್ಷ ವಯಸ್ಸಿನ ಸಾಹಿತಿ ಎಸ್ ಎಲ್ ಬೈರಪ್ಪ (SL Bhyrappa) ಅವರನ್ನು ಭೇಟಿಯಾಗಿ ಗೌರವ ಸಲ್ಲಿಸಿದ ಬಳಿಕ ಅವರ ಪಕ್ಕ ಕೂತು ಯೋಗಕ್ಷೇಮ ವಿಚಾರಿಸಿದರು.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹಿರಿಯ ನಾಯಕರನ್ನು, ಗಣ್ಯರನ್ನು ಭೇಟಿಯಾಗಿ ಅವರಿಂದ ಆಶೀರ್ವಾದ ಪಡೆಯುವ ಕೆಲಸ ಮುಂದುವರಿಸಿದ್ದಾರೆ. ಕಳೆದ ವಾರ ಹೆಚ್ ಡಿ ದೇವೇಗೌಡ, ಎಸ್ ಎಂ ಕೃಷ್ಣ (SM Krishna), ಬಸವರಾಜ ಬೊಮ್ಮಾಯಿ ಮೊದಲಾದವರನ್ನು ಭೇಟಿಯಾಗಿದ್ದ ವಿಜಯೇಂದ್ರ ಇಂದು ನಾಡಿನ ಖ್ಯಾತ, ಪದ್ಮಭೂಷಣ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ 92-ವರ್ಷ ವಯಸ್ಸಿನ ಸಾಹಿತಿ ಎಸ್ ಎಲ್ ಬೈರಪ್ಪ (SL Bhyrappa) ಅವರನ್ನು ಭೇಟಿಯಾಗಿ ಗೌರವ ಸಲ್ಲಿಸಿದ ಬಳಿಕ ಅವರ ಪಕ್ಕ ಕೂತು ಯೋಗಕ್ಷೇಮ ವಿಚಾರಿಸಿದರು. ಪಂಪ ಮತ್ತು ನಾಡೋಜ ಪ್ರಶಸ್ತಿಗಳಿಗೂ ಪಾತ್ರರಾಗಿರುವ ಭೈರಪ್ಪರ ಎಡಪಕ್ಕದಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಪ್ರಾಯಶಃ ವಿಜಯೇಂದ್ರ ಹಾಗೂ ಸಾಹಿತಿ ಇಬ್ಬರಿಗೂ ಪರಿಚಿತರು ಅನಿಸುತ್ತೆ. ಇಂದು ಬೆಳಗ್ಗೆಯೇ ಅಧ್ಯಕ್ಷರು ತಮ್ಮನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿ, ತಾವು ಊರಲ್ಲಿರುವ ಬಗ್ಗೆ ವಿಚಾರಿಸಿ ಎಂದಿದ್ದರು, ತಾವು ಲಭ್ಯರಿರೋದು ಖಚಿತವಾದ ಬಳಿಕ ಭೇಟಿಯಾಲು ಬಂದಿದ್ದಾರೆ ಅಂತ ಹೇಳಿದಾಗ ಭೈರಪ್ಪ ಬಹಳ ಸಂತೋಷ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 20, 2023 12:53 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.