ಪಕ್ಷದ ನಾಯಕರು ಸಿಎಲ್ ಪಿ ಸಭೆಯಲ್ಲಿ ಪಾಲ್ಗೊಂಡರೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೃದು ಧೋರಣೆ!

ಅರುಣ್​ ಕುಮಾರ್​ ಬೆಳ್ಳಿ

Updated on: Dec 14, 2023 | 12:41 PM

ಒಂದು ವಿಷಯ ಸ್ಪಷ್ಟವಾಗುತ್ತಿದೆ. ವಿಶ್ವನಾಥ್, ಹೆಬ್ಬಾರ್ ಮತ್ತು ಸೋಮಶೇಖರ್ ಮೂವರೂ ಬಿಜೆಪಿ ತಮ್ಮನ್ನು ಉಚ್ಚಾಟಿಸಲಿ ಅಂತ ಕಾಯುತ್ತಿದ್ದಾರೆ ಅಥವಾ ಅಂಥ ಸನ್ನಿವೇಶ ಉದ್ಭವಿಸಲು ಪಕ್ಷದ ವರಿಷ್ಠರನ್ನು ಕೆಣಕುತ್ತಿದ್ದಾರೆ. ಬೇರೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಭಾಗವಹಿಸಿದರೂ ವಿಜಯೇಂದ್ರ ಅವರೊಂದಿಗೆ ಮಾತಾಡುತ್ತೇನೆ ಅನ್ನುತ್ತಾರೆ. ಕೊಂಚ ಕಠಿಣರಾಗುವ, ಗಡಸುತನ ತೋರುವ ಅಧಿಕಾರ ರಾಜ್ಯಾಧ್ಯಕ್ಷನಿಗಿಲ್ಲವೇ?

ಬೆಳಗಾವಿ: ನಿನ್ನೆ ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ನಡೆಯಿತು ಮತ್ತು ಅದಾದ ಬಳಿಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಔತಣಕೂಟವೊಂದನ್ನು ಏರ್ಪಡಿಸಿದ್ದರು. ಅದರಲ್ಲೇನೂ ವಿಶೇಷವಿಲ್ಲ ಆದರೆ ವಿಶೇಷತೆ ಇರೋದು ಬಿಜೆಪಿ ನಾಯಕರಾದ ಎಸ್ ಟಿ ಸೋಮಶೇಖರ್ (ST Somashekhar), ಶಿವರಾಂ ಹೆಬ್ಬಾರ್ (Shivaram Hebbar) ಮತ್ತು ಹೆಚ್ ವಿಶ್ವನಾಥ್ (H Vishwanath) ಅದರಲ್ಲಿ ಭಾಗವಹಿಸಿದ್ದು. ಇವತ್ತು ಅಧಿವೇಶನದಲ್ಲಿ ಭಾಗವಹಿಸಲು ಸುವರ್ಣ ಸೌಧಕ್ಕೆ ತೆರಳುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಆ ಮೂವರ ಬಗ್ಗೆ ಬೆಳಗ್ಗೆ ಮಾಹಿತಿ ಸಿಕ್ಕಿದೆ, ಅವರನ್ನು ಕರೆದು ಮಾತಾಡಿ ಸ್ಪಷ್ಟೀಕರಣ ಕೇಳುವುದಾಗಿ ಹೇಳಿದರು. ತ್ರಿವಳಿಗಳು ಡಿನ್ನರ್ ನಲ್ಲೂ ಪಾಲ್ಗೊಂಡಿದ್ದಾರೆ ಅಂತ ಪತ್ರಕರ್ತರು ವಿಜಯೇಂದ್ರ ಗಮನಕ್ಕೆ ತಂದಾಗ, ಇದು ನಿಜಕ್ಕೂ ಗಂಭೀರವಾದ ವಿಚಾರ ಅವರನ್ನು ಕರೆದು ಮಾತಾಡೋದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.